ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಸಿಳಿದರು.
ಕೊರೊನಾ ಸೋಂಕಿಗೆ ಹೊಸ ಚಿಕಿತ್ಸೆಯಾಗಿರುವ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದೊಂದು ಹೊಸ ಚಿಕಿತ್ಸೆಯಾಗಿದೆ. ಕೊರೊನ ಪಾಸಿಟಿವ್ ಆಗಿ ಅದರಿಂದ ಗುಣಮುಖರಾಗಿರುವವರಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಕೊರೊನ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ಮಾಡುವ ವಿಧಾನ ಇದಾಗಿದೆ.

ಬೆಂಗಳೂರಿನ 5 ಜನ ದಾನಿಗಳಿಂದ ಪ್ಲಾಸ್ಮಾ ಪಡೆದುಕೊಳ್ಳಲಾಗಿದೆ. ಈ ಚಿಕಿತ್ಸೆ ಮಾಡುವ ವೇಳೆ ಚಿಕಿತ್ಸೆಗೊಳಗಾಗುವ ರೋಗಿಯ ಒಪ್ಪಿಗೆ ಪಡೆದುಕೊಂಡು ಚಿಕಿತ್ಸೆ ಮಾಡಬೇಕಾಗಿದೆ ಎಂದು ಹೇಳಿದರು.

ಆಂದ್ರಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನ ಪಾಸಿಟಿವ್ ನೊಂದಿಗೆ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದರು. ವೈದ್ಯರು ಇವರಿಗೆ ಕೊನೆಯ ಕ್ಷಣದಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಗಾಗಿ ಇವರಿಂದ ಅನುಮತಿ ಪಡೆದು ಚಿಕಿತ್ಸೆ ಕೈಗೊಂಡರು. ಚಿಕಿತ್ಸೆಯಿಂದ ಚೇತರಿಕೆಯನ್ನು ಕಂಡರು. ದುರಾದೃಷ್ಟ ವಶಾತ್ ಆ ವ್ಯಕ್ತಿ ಹೃದಯಾಘಾತದಿಂದ ಮೃತಪದ್ದಾರೆ. ಅವರು ಮೃತಪಟ್ಟಿರುವುದು ಪ್ಲಾಸ್ಮಾ ಥೆರಪಿಯ ವೈಫಲ್ಯವಲ್ಲ. ಇದು ಪ್ಲಾಸ್ಮಾ ಥೆರಪಿಯ ಸೋಲಲ್ಲ. ಪ್ಲಾಸ್ಮಾ ಥೆರಪಿಯ ಬಗ್ಗೆ ಕೆಲವು ಚಿಕಿತ್ಸೆಗಳಾದ ಬಳಿಕ ಅದರ ಮೇಲೆ ನಾವು ತೀರ್ಪುಕೊಡಬೇಕು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಚೀಟಿ ಎತ್ತುವ ಮೂಲಕ ಹುಡುಗನೊಂದಿಗೆ ಮದುವೆ

ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ

ಆಲಮಟ್ಟಿ : ರಾಷ್ಟ್ರಧರ್ಮ ದೃಷ್ಟಾರ,ನೈಷ್ಟಿಕ ಬ್ರಮ್ಮಚಾರಿ,ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ ಮಂಜಪ್ಪನವರ ಕರ್ಮಭೂಮಿಯಲ್ಲಿಂದು…

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…