ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ, ದೇವಾಲಯಗಳನ್ನು ನಂಬಿ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದವು. ಆದರೆ ಇದೀಗ ದೇವಸ್ಥಾನ ಆರಂಭಕ್ಕೆ ಕೆಲವು ನಿಯಮಗಳನ್ನು ವಿಧಿಸಲಾಗಿದೆ. ಹೀಗಾಗಿ ತಿರುಪತಿಯ ತಿಮ್ಮಪ್ಪನ ದರ್ಶನ ಆರಂಭವಾಗಿದೆ.
ಎರಡು ತಿಂಗಳ ನಂತರ ಭಕ್ತರಿಗೆ ತಿಮ್ಮಪ್ಪನ ದರ್ಶನ ಆರಂಭವಾಗಿದ್ದು ಕರೋನಾ ಭೀತಿ ಹಿನ್ನೆಲೆ ಮಾರ್ಚ್ 19 ರಂದು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರ ದರ್ಶನವನ್ನು ಟಿಟಿಡಿ ಆಡಳಿತ ಮಂಡಳಿ ರದ್ದು ಮಾಡಿತ್ತು. ಸುಮಾರು ಎರಡು ತಿಂಗಳ ಕಾಲ ದೇವಾಲಯದಲ್ಲಿ ದೇವರ ಸೇವೆ, ಪೂಜೆ ಕಾರ್ಯಕ್ರಮಗಳನ್ನು ಏಕಾಂತದಲ್ಲಿ ನಡೆಸಲಾಗುತ್ತಿತ್ತು. ಇಂದಿನಿಂದ ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಹೊರರಾಜ್ಯಗಳು ಹಾಗೂ ಆಂಧ್ರದ ಹೊರ ಜಿಲ್ಲೆಗಳ ಜನರಿಗೆ ನಿಷೇಧ ಮಾಡಲಾಗಿದೆ. ಪ್ರತಿದಿನ 7 ಸಾವಿರ ಜನರಿಗೆ ಮಾತ್ರ ತಿಮ್ಮಪ್ಪನ ದರ್ಶನ ಭಾಗ್ಯ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ಕೋರೊನಾ ಸೋಂಕು ನಿಯಂತ್ರಣ, ಚಿಕಿತ್ಸೆ, ಲಸಿಕಾಕರಣ ಸಭೆಯಲ್ಲಿ ಹೆಳಿದ್ದೆನು?

ಗದಗ: ಸರ್ಕಾರ ತಿಳಿಸಿದ ಆಧ್ಯತಾ ಗುಂಪುಗಳ ಅರ್ಹ ಫಲಾನುಭವಿಗಳಿಗೆ ಆದ್ಯತೆಯನುಸಾರ ಮೊದಲು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು. ಅವರು ಜಿಲ್ಲಾಡಳಿತ ಭವನದ ಜಿ.ಪಂ ವಿಡಿಯೋ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗಳೊಂದಿಗೆ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂ.ಎಚ್.ಒ) ಕೋವಿಡ್-19 ನಿಯಂತ್ರಿಸಲು ಹಲವಾರು ಮಾರ್ಗಸೂಚಿ, ಸಲಹೆಗಳನ್ನು ರೂಪಿಸಿದೆ.

ಕೈಗಳು ವಿವಿಧ ಮೇಲ್ಮೈಗಳನ್ನು ಆಗಾಗ ಸ್ಪರ್ಶಿಸುವುದರಿಂದ ಮುಂಗೈಯನ್ನು ಸ್ವಚ್ಛಗೊಳಿಸುವುದು ಮುಖ್ಯ. ಇದಕ್ಕಾಗಿ ಆಲ್ಕೊಹಾಲ್ ಆಧರಿತ ಸ್ಯಾನಿಟೈಸರ್ ಬಳಕೆ ಮಾಡಬೇಕು. ಆದರೆ ನೀರು ಮತ್ತು ಸೋಪ್

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.