ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಕೊರೊನ ಪರಿಣಾಮದಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ನಾಳೆ ರಾಜ್ಯದ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಎಂಎಲ್ಸಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ಮಾಡಿ, ಸೋಮವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಧ್ಯವಾದರೆ ಪರಿಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯನ್ನು ನಿಗದಿಮಾಡುತ್ತೇವೆ ಎಂದು ತಿಳಿಸಿದರು.
ಸರ್ಕಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮಾಡಬೇಕೆನ್ನುವ ಅಭಿಪ್ರಾಯವಿದೆ. ಹೀಗಾಗಿ ಹಲವು ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.
ಎಸ್ಎಸ್ಎಲ್ಸಿ ಮಕ್ಕಳಿಗೆ ರಿವಿಷನ್ ತರಗತಿಗಳನ್ನು ದೂರದರ್ಶನ ಚಂದನ ವಾಹಿನಿಯಲ್ಲಿ ಮಾಡುತ್ತಿದ್ದೇವೆ ಎಂದರು.