ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಸಿಳಿದರು.
ಕೊರೊನಾ ಸೋಂಕಿಗೆ ಹೊಸ ಚಿಕಿತ್ಸೆಯಾಗಿರುವ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದೊಂದು ಹೊಸ ಚಿಕಿತ್ಸೆಯಾಗಿದೆ. ಕೊರೊನ ಪಾಸಿಟಿವ್ ಆಗಿ ಅದರಿಂದ ಗುಣಮುಖರಾಗಿರುವವರಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಕೊರೊನ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ಮಾಡುವ ವಿಧಾನ ಇದಾಗಿದೆ.

ಬೆಂಗಳೂರಿನ 5 ಜನ ದಾನಿಗಳಿಂದ ಪ್ಲಾಸ್ಮಾ ಪಡೆದುಕೊಳ್ಳಲಾಗಿದೆ. ಈ ಚಿಕಿತ್ಸೆ ಮಾಡುವ ವೇಳೆ ಚಿಕಿತ್ಸೆಗೊಳಗಾಗುವ ರೋಗಿಯ ಒಪ್ಪಿಗೆ ಪಡೆದುಕೊಂಡು ಚಿಕಿತ್ಸೆ ಮಾಡಬೇಕಾಗಿದೆ ಎಂದು ಹೇಳಿದರು.

ಆಂದ್ರಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನ ಪಾಸಿಟಿವ್ ನೊಂದಿಗೆ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದರು. ವೈದ್ಯರು ಇವರಿಗೆ ಕೊನೆಯ ಕ್ಷಣದಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಗಾಗಿ ಇವರಿಂದ ಅನುಮತಿ ಪಡೆದು ಚಿಕಿತ್ಸೆ ಕೈಗೊಂಡರು. ಚಿಕಿತ್ಸೆಯಿಂದ ಚೇತರಿಕೆಯನ್ನು ಕಂಡರು. ದುರಾದೃಷ್ಟ ವಶಾತ್ ಆ ವ್ಯಕ್ತಿ ಹೃದಯಾಘಾತದಿಂದ ಮೃತಪದ್ದಾರೆ. ಅವರು ಮೃತಪಟ್ಟಿರುವುದು ಪ್ಲಾಸ್ಮಾ ಥೆರಪಿಯ ವೈಫಲ್ಯವಲ್ಲ. ಇದು ಪ್ಲಾಸ್ಮಾ ಥೆರಪಿಯ ಸೋಲಲ್ಲ. ಪ್ಲಾಸ್ಮಾ ಥೆರಪಿಯ ಬಗ್ಗೆ ಕೆಲವು ಚಿಕಿತ್ಸೆಗಳಾದ ಬಳಿಕ ಅದರ ಮೇಲೆ ನಾವು ತೀರ್ಪುಕೊಡಬೇಕು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…

ಆರ್ಕಿಟೆಕ್ಟ್ ಹೇಳಿದ್ರೆ ಕೇಸರಿ ಹಾಕ್ತೀನಿ: ಬಿ ಸಿ ನಾಗೇಶ್

ಉತ್ತರಪ್ರಭ ಸುದ್ದಿ ಗದಗ: ವಿವೇಕ ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚುವ ಆರ್ಕಿಟೆಕ್ಟರ ಏನಾದರೂ ಕೇಸರಿ…

ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿಕೊಂಡರೆ ಹುಷಾರ್!

ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.