ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಸಿಳಿದರು.
ಕೊರೊನಾ ಸೋಂಕಿಗೆ ಹೊಸ ಚಿಕಿತ್ಸೆಯಾಗಿರುವ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದೊಂದು ಹೊಸ ಚಿಕಿತ್ಸೆಯಾಗಿದೆ. ಕೊರೊನ ಪಾಸಿಟಿವ್ ಆಗಿ ಅದರಿಂದ ಗುಣಮುಖರಾಗಿರುವವರಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಕೊರೊನ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ಮಾಡುವ ವಿಧಾನ ಇದಾಗಿದೆ.

ಬೆಂಗಳೂರಿನ 5 ಜನ ದಾನಿಗಳಿಂದ ಪ್ಲಾಸ್ಮಾ ಪಡೆದುಕೊಳ್ಳಲಾಗಿದೆ. ಈ ಚಿಕಿತ್ಸೆ ಮಾಡುವ ವೇಳೆ ಚಿಕಿತ್ಸೆಗೊಳಗಾಗುವ ರೋಗಿಯ ಒಪ್ಪಿಗೆ ಪಡೆದುಕೊಂಡು ಚಿಕಿತ್ಸೆ ಮಾಡಬೇಕಾಗಿದೆ ಎಂದು ಹೇಳಿದರು.

ಆಂದ್ರಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನ ಪಾಸಿಟಿವ್ ನೊಂದಿಗೆ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದರು. ವೈದ್ಯರು ಇವರಿಗೆ ಕೊನೆಯ ಕ್ಷಣದಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಗಾಗಿ ಇವರಿಂದ ಅನುಮತಿ ಪಡೆದು ಚಿಕಿತ್ಸೆ ಕೈಗೊಂಡರು. ಚಿಕಿತ್ಸೆಯಿಂದ ಚೇತರಿಕೆಯನ್ನು ಕಂಡರು. ದುರಾದೃಷ್ಟ ವಶಾತ್ ಆ ವ್ಯಕ್ತಿ ಹೃದಯಾಘಾತದಿಂದ ಮೃತಪದ್ದಾರೆ. ಅವರು ಮೃತಪಟ್ಟಿರುವುದು ಪ್ಲಾಸ್ಮಾ ಥೆರಪಿಯ ವೈಫಲ್ಯವಲ್ಲ. ಇದು ಪ್ಲಾಸ್ಮಾ ಥೆರಪಿಯ ಸೋಲಲ್ಲ. ಪ್ಲಾಸ್ಮಾ ಥೆರಪಿಯ ಬಗ್ಗೆ ಕೆಲವು ಚಿಕಿತ್ಸೆಗಳಾದ ಬಳಿಕ ಅದರ ಮೇಲೆ ನಾವು ತೀರ್ಪುಕೊಡಬೇಕು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ಸಾರಿಗೆ ಸಂಸ್ಥೆಯ ಬಸ್ ಸೇವೆ ಬಂದ್!

ಬೆಂಗಳೂರು: ವಲಸಿಗರು, ಕೂಲಿ ಕಾರ್ಮಿಕರನ್ನು ಊರುಗಳಿಗೆ ತಲುಪಿಸಲು ಕಾರ್ಯಾಚರಣೆಗೊಳಿಸುತ್ತಿರುವ ಬಸ್‌ಗಳ ಸೇವೆ ಮೇ. 8 ರಿಂದ…

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.