ಮೇ.18ರಿಂದ ಸಾರಿಗೆ ಸಂಚಾರ ಆರಂಭ?

ಬೆಂಗಳೂರು: ಮೇ.18ರಿಂದ ಸಾರಿಗೆ ಸಂಚಾರ ಸಂಪೂರ್ಣವಾಗಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ.

ಮೇ.17ಕ್ಕೆ ಲಾಕ್ಡೌನ್ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಬಿಎಂಟಿಸಿ ಆದೇಶವೊಂದನ್ನು ಹೊರಡಿಸಿದ್ದು, ಲಾಕ್ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸೇವೆ ಮತ್ತೆ ಆರಂಭವಾಗುವ ಸುಳಿವನ್ನು ನೀಡಿದೆ.

ಮೇ 18ರಿಂದ ಎಲ್ಲ ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ಡೌ ನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸೇರಿದಂತೆ ಎಲ್ಲಾ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಂಡಿದ್ದವು. ಕೆಲ ಬಿಎಂಟಿಸಿ ಬಸ್ ಗಳು ತುರ್ತು ಆರೋಗ್ಯ ಸೇವೆಗಾಗಿ ರಸ್ತೆಗೆ ಇಳಿದಿದ್ದವು. ಅದನ್ನು ಹೊರತುಪಡೆಸಿ ಸಾರ್ವಜನಿಕರ ಓಡಾಟಕ್ಕೆ ಬಿಎಂಟಿಸಿ ಲಭ್ಯವಿರಲಿಲ್ಲ.

ಈಗ ಸರ್ಕಾರವು ಕೊರೊನಾ ವೈರಸ್ ಲಾಕ್ಡೌ ನ್ ಹಿನ್ನೆಲೆ ಸಾರಿಗೆ ಇಲಾಖೆಯನ್ನು ಅಗತ್ಯ ಸೇವೆ ಸಲ್ಲಿಸುವ ಇಲಾಖೆ ಎಂದು ಪರಿಗಣಿಸಿದೆ. ಸದರಿ ಇಲಾಖೆಯಲ್ಲಿ ಬಿಎಂಟಿಸಿಯು ಒಳಪಡುತ್ತದೆ. ಆದ್ದರಿಂದ ಮೇ 17ರಂದು ಲಾಕ್ಡೌನ್ ಅವಧಿ ಪೂರ್ಣಗೊಳ್ಳಲಿದ್ದು, ಮೇ 18ರಿಂದ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಆರ್ ಸಿಬಿ ಈ ಬಾರಿ ಕಪ್ ಗೆಲ್ಲುವುದಿಲ್ಲವಂತೆ!? ಕಾರಣವೇನು ಗೊತ್ತಾ?

ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

ಬೀದರ್: ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್…

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.

ಗದಗ ಜಿಲ್ಲೆಯಲ್ಲಿ ಮಣ್ಣು-ಮಾಫಿಯಾ ಹಸಿವಿಗೆ ಬೋಳಾಗುತ್ತಿವೆ ಹೊಲ!

ಲಕ್ಷ್ಮೇಶ್ವರ: ಹಾಡು ಹಗಲೇ ಜಿಲ್ಲೆಯ ಲಕ್ಷ್ಮೇಶ್ವರದ ಹಲವು ಹಳ್ಳಿಗಳಲ್ಲಿ ಹೊಲಗಳ ಮಣ್ಣನ್ನು ಹೊತ್ತೊಯುತ್ತಿದೆ ಮಣ್ಣು ಮಾಫಿಯಾ.…