ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ(68) ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಒಂದು ವಾರದ ಹಿಂದೆಯಷ್ಟೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ. ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಫಾರ್ಮ ಹೌಸ್ ನಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೇ ನಡೆಯಲಿದೆ.
ಕೊರೋನಾ ಭೀತಿ ಇರುವ ಹಿನ್ನೆಲೆ ಕೇವಲ ಕುಟುಂಬಸ್ಥರಿಗೆ ಕೇವಲ 25 ಜನರಿಗೆ ಮಾತ್ರ ಅಂತ್ಯಕ್ರಿಯೇಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ರೈ ಜಯಕರ್ನಾಟಕ ಸಂಘಟನೆ ಸಂಸ್ಥಾಪಕರು ಹಾಗೂ ಎಮ್.ಆರ್.ಆರ್ ಗ್ರೂಪ್ ನ ಮಾಲಿಕರು ಆಗಿದ್ದರು. ಹೀಗಾಗಿ ಸಂಘಟನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ನಗರದ ಮಣಿಪಾಲ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳು, ಮೂರು ಜನ ಸಹೋದರರು ಹಾಗೂ ಒರ್ವ ಸಹೋದರಿ ಇದ್ದಾರೆ. ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ಖಾಯಿಲೆಗೆ ದೆಹಲಿ, ಚನ್ನೈ, ಉಡುಪಿ, ಮಣಿಪಾಲ್, ಬೆಂಗಳೂರು ಸೇರಿದಂತೆ ವಿವಿಧ ಕಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗಿದ್ದ ಲಿವರ್ ಕ್ಯಾನ್ಸರ್ ಗುಣಮುಖವಾಗಿತ್ತು. ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ಸಾವಿನ ಸನಿಹಕ್ಕೆ ತಂದೊಡ್ಡಿತು.

ಖಾಸಗಿ ಚಾನೆಲ್ವೊಂದಕ್ಕೆ ಮುತ್ತಪ್ಪ ರೈ ಅವರು ನೀಡಿದ ಸಂದರ್ಶನ

Leave a Reply

Your email address will not be published. Required fields are marked *

You May Also Like

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಎರಡನೇ ಪ್ರಿಯಕರನಿಂದ ಮೊದಲನೇ ಪ್ರಿಯಕರನ ಮೇಲಿನ ಸೇಡು ತೀರಿಸಿಕೊಂಡ ಪ್ರೇಯಸಿ!

ಶಿವಮೊಗ್ಗ : ಎರಡನೇ ಪ್ರಿಯಕರನಿಂದ ಮೊದಲ ಪ್ರಿಯಕರನನ್ನು ಪ್ರೇಯಸಿಯೇ ಕೊಲೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ.

ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.