ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ(68) ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ.

ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮುತ್ತಪ್ಪ ರೈ ಒಂದು ವಾರದ ಹಿಂದೆಯಷ್ಟೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ. ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಫಾರ್ಮ ಹೌಸ್ ನಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೇ ನಡೆಯಲಿದೆ.
ಕೊರೋನಾ ಭೀತಿ ಇರುವ ಹಿನ್ನೆಲೆ ಕೇವಲ ಕುಟುಂಬಸ್ಥರಿಗೆ ಕೇವಲ 25 ಜನರಿಗೆ ಮಾತ್ರ ಅಂತ್ಯಕ್ರಿಯೇಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ರೈ ಜಯಕರ್ನಾಟಕ ಸಂಘಟನೆ ಸಂಸ್ಥಾಪಕರು ಹಾಗೂ ಎಮ್.ಆರ್.ಆರ್ ಗ್ರೂಪ್ ನ ಮಾಲಿಕರು ಆಗಿದ್ದರು. ಹೀಗಾಗಿ ಸಂಘಟನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ನಗರದ ಮಣಿಪಾಲ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳು, ಮೂರು ಜನ ಸಹೋದರರು ಹಾಗೂ ಒರ್ವ ಸಹೋದರಿ ಇದ್ದಾರೆ. ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ಖಾಯಿಲೆಗೆ ದೆಹಲಿ, ಚನ್ನೈ, ಉಡುಪಿ, ಮಣಿಪಾಲ್, ಬೆಂಗಳೂರು ಸೇರಿದಂತೆ ವಿವಿಧ ಕಡೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗಿದ್ದ ಲಿವರ್ ಕ್ಯಾನ್ಸರ್ ಗುಣಮುಖವಾಗಿತ್ತು. ಆದರೆ ಮೆದುಳಿನಲ್ಲಿ ಕ್ಯಾನ್ಸರ್ ಗಡ್ಡೆ ಸಾವಿನ ಸನಿಹಕ್ಕೆ ತಂದೊಡ್ಡಿತು.

ಖಾಸಗಿ ಚಾನೆಲ್ವೊಂದಕ್ಕೆ ಮುತ್ತಪ್ಪ ರೈ ಅವರು ನೀಡಿದ ಸಂದರ್ಶನ

Leave a Reply

Your email address will not be published. Required fields are marked *

You May Also Like

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಸತತವಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಮಾಜಿ ಶಾಸಕ ಎಸ್.ಎನ್.ಪಾಟೀಲ ಅವರ ಪುತ್ರ ಸತೀಶಗೌಡ ಎಸ್.ಪಾಟೀಲ್ ಹಾಗು ಉಪಾಧ್ಯಕ್ಷರಾಗಿ ಲೋಹಿತಪ್ಪ ಮರಿಹೊಳಲಣ್ಣವರ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಜರುಗಿದ ಚುನಾವಣೆಯಲ್ಲಿ ಆಯ್ಕೆಯಾ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ಸದಸ್ಯರು ಸನ್ಮಾನಿಸಿದರು.

ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸನೇ ಇಲ್ಲಿ ಕಿರುಕುಳ ನೀಡಿದ್ದಾನೆ!!

ನವದೆಹಲಿ : ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಬ್ ಇನ್ಸಪೆಕ್ಟರ್ ಒಬ್ಬರನ್ನು ಬಂಧಿಸಿದ್ದಾರೆ.

ಕಾಲುವೆಗೆ ಉರುಳಿ ಬಿದ್ದ ಕಾರು: ಇಬ್ಬರು ಸ್ಥಳದಲ್ಲೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…