ಬೆಂಗಳೂರು: ಇತ್ತಿಚೆಗಷ್ಟೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ. ಪಿಎಂ ಕೇರ್ ಗೆ ನೀಡಿದ ದೇಣಿಗೆಯನ್ನು ಗೌರವ ಪೂರ್ವಕವಾಗಿ ಸ್ವೀಕರಿಸುತ್ತೇನೆ. ನೀವು ನೀಡಿದ ದೇಣಿಗೆ ಇತರರಿಗೂ ಪ್ರೇರಣೆಯಾಗಲಿದೆ. ಕೋವಿಡ್ ವಿರುದ್ದದ ಹೋರಾಟದಲ್ಲಿ ಗೆಲುವು ಸಾಧಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ ಪತ್ರದಲ್ಲಿ ಬರೆಯಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರಿಗೆ ಕಳುಹಿಸಿದ ಪ್ರಶಂಸಾ ಪತ್ರದ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಟ್ವೀಟ್

ಪಿಎಂ ಕೇರ್, ಕರ್ನಾಟಕ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ದೇವೇಗೌಡ್ರು, ತಲಾ ಒಂದು ಲಕ್ಷ ರೂಪಾಯಿ ದೇಣಿಗೆಯನ್ನು, ತಮಗೆ ಬರುವ ಪೆನ್ಸನ್ ಹಣದ ಮೂಲಕ ನೀಡಿದ್ದರು. ಕೊರೋನಾ ಸೋಂಕು ನಿಯಂತ್ರಣದ ವಿರುದ್ಧ ನಡೆದ ಹೋರಾಟದಲ್ಲಿ ಎಲ್ಲರೂ ಒಂದಾಗಬೇಕಾಗಿದೆ. ದೇಶದ ಬಡವರಿಗೆ ಮತ್ತು ನಿರ್ಗತಿಕರಿಗೆ ಸಹಾಯ ಮಾಡಲು ಪ್ರಯತ್ನಿಸೋಣ ಎಂದು ಎಚ್ಡಿಡಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…

ಪ್ಲಾಸ್ಮಾ ಚಿಕಿತ್ಸೆಯಿಂದ ಗಂಭೀರ ಪರಿಸ್ಥಿತಿಯ ಸೋಂಕಿತರ ರಕ್ಷಣೆ ಕಷ್ಟ: ಕೇಜ್ರಿವಾಲ್

ದೆಹಲಿ: ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಜೀವವನ್ನು ಪ್ಲಾಸ್ಮಾ ಚಿಕಿತ್ಸೆಯಿಂದ ಉಳಿಸುವುದು ತೀರಾ ಕಷ್ಟ ಎಂದು…