ಬೆಂಗಳೂರು: ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಕ್ಕೆ ಜೂನ್ 5ರ ನಂತರ 9ರ ಮಧ್ಯೆ ಯಾವ ದಿನವಾದರೂ ಪ್ರವೇಶವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆರಂಭದಲ್ಲಿ ಮುಂಗಾರು ಮಳೆ ದಕ್ಷಿಣ ಅಂಡಮಾನ್ ಸಮುದ್ರದತ್ತ ಬೀಸಿ ನಂತರ ಉತ್ತರಾಭಿಮುಖವಾಗಿ ಪಶ್ಚಿಮ ಭಾಗಕ್ಕೆ ಬಂಗಾಳ ಕೊಲ್ಲಿ ಮೂಲಕ ವಿಸ್ತಾರಗೊಳ್ಳಲಿದೆ. ಅಂಡಮಾನ್ ಸಮುದ್ರ ತೀರದಲ್ಲಿ ಸಾಮಾನ್ಯವಾಗಿ ಮೇ. 22ರ ಹೊತ್ತಿಗೆ ನೈರುತ್ಯ ಮುಂಗಾರು ಪ್ರವೇಶವಾಗುತ್ತದೆ. ಪ್ರಸ್ತುತ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿದೆ.

ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗದಲ್ಲಿ ನಾಳೆ ಚಂಡಮಾರುತ ಏಳುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಅಂಡಮಾನ್ ಗೆ ತಲುಪಿದ 10 ದಿನಗಳ ನಂತರ ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಬೆಳಗಾವಿಯಲ್ಲಿ ಗ್ಯಾಂಗ್ ವಾರ್!: ಬರ್ಭರ ಹತ್ಯೆ!

ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿತೆ ಸರ್ಕಾರ? : ‘ಅನರ್ಹ’ ವಿಶ್ವನಾಥ್ ಅರ್ಹರಾದದ್ದು ಹೇಗೆ?

ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ನಿಮ್ಮ ಅರ್ಹತೆ ಸಾಬೀತು ಮಾಡಿ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಅಲ್ಲಿವರೆಗೂ ಯಾವುದೇ ಪದವಿ ಪಡೆಯುವಂತಿಲ್ಲ ಎಂದಿತ್ತು ಕೂಡ.

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.