ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಬೆಂಗಳೂರು: ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಕ್ಕೆ ಜೂನ್ 5ರ ನಂತರ 9ರ ಮಧ್ಯೆ ಯಾವ ದಿನವಾದರೂ ಪ್ರವೇಶವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆರಂಭದಲ್ಲಿ ಮುಂಗಾರು ಮಳೆ ದಕ್ಷಿಣ ಅಂಡಮಾನ್ ಸಮುದ್ರದತ್ತ ಬೀಸಿ ನಂತರ ಉತ್ತರಾಭಿಮುಖವಾಗಿ ಪಶ್ಚಿಮ ಭಾಗಕ್ಕೆ ಬಂಗಾಳ ಕೊಲ್ಲಿ ಮೂಲಕ ವಿಸ್ತಾರಗೊಳ್ಳಲಿದೆ. ಅಂಡಮಾನ್ ಸಮುದ್ರ ತೀರದಲ್ಲಿ ಸಾಮಾನ್ಯವಾಗಿ ಮೇ. 22ರ ಹೊತ್ತಿಗೆ ನೈರುತ್ಯ ಮುಂಗಾರು ಪ್ರವೇಶವಾಗುತ್ತದೆ. ಪ್ರಸ್ತುತ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿದೆ.

ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗದಲ್ಲಿ ನಾಳೆ ಚಂಡಮಾರುತ ಏಳುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಅಂಡಮಾನ್ ಗೆ ತಲುಪಿದ 10 ದಿನಗಳ ನಂತರ ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Exit mobile version