ಭೋಪಾಲ್: ಲಾಕ್ ಡೌನ್ ನಿಂದಾಗಿ ಕಾರ್ಮಿಕರು ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ. ಹಲವರಂತೂ ತಮ್ಮ ಊರು ತಲುಪಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ಇನ್ನೂ ಹಲವರು ಕಳ್ಳ ಹಾದಿ ಹಿಡಿದು ಊರು ಸೇರುತ್ತಿದ್ದಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ತನ್ನ ಪತ್ನಿ ಹಾಗೂ ಮಗುವನ್ನು ಗಾಡಿ ಬಂಡಿಯಲ್ಲಿ ಕುರಿಸಿಕೊಂಡು ಎಳೆದುಕೊಂಡು ಬಂದಿರುವ ಕಾರ್ಮಿಕನನ್ನು ರಾಮು ಘೋರ್ಮರೆ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಮಾ. 17ರಂದು ಕೆಲಸವನ್ನು ಹುಡುಕಿಕೊಂಡು ಕುಟುಂಬ ಸಮೇತ ತೆಲಂಗಾಣಕ್ಕೆ ಹೋಗಿದ್ದರು. ಆದರೆ, ಈ ಕುಟುಂಬ ಬಂದ ಐದೇ ದಿನದಲ್ಲಿ ಲಾಕ್ ಡೌನ್ ಘೋಷಣೆಯಾಯಿತು. ಹೀಗಾಗಿ ಮರಳಿ ಊರು ಸೇರಬೇಕೆಂದು ನಿರ್ಧರಿಸಿದ್ದಾರೆ. ಆದರೆ, ಗರ್ಭಿಣಿ ತುಂಬು ಗರ್ಭಿಣಿಯಾಗಿದ್ದರಿಂದಾಗಿ ಮಗು, ಚಿಕ್ಕದಿರುವದರಿಂದಾಗಿ ಇಬ್ಬರನ್ನೂ ಬಂಡೆಯಲ್ಲಿ ಕೂರಿಸಿಕೊಂಡು ಪತಿರಾಯ ಹೆಜ್ಜೆ ಹಾಕಿದ್ದಾರೆ.

ಕೇವಲ ಒಂದು ಹೊತ್ತಿನ ಊಟ ತಿಂದು ದಿನ ಪೂರ್ತಿ ತನ್ನ ಗರ್ಭಿಣಿ ಹೆಂಡತಿಯ ಜೊತೆ ಮಗುವನ್ನು ಎಳೆದುಕೊಂಡು ಬಂದ ರಾಮುವನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ವಿಚಾರಿಸಿ ನಂತರ ಅವನಿಗೆ ತಿನ್ನಲು ಊಟ ಮತ್ತು ಬಿಸ್ಕೆಟ್ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ನಟಿ ನಯನತಾರಾ ಅವರ ಮತ್ತೊಂದು ಲವ್ ಸ್ಟೋರಿ ಇದು!!

ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…