ನವದೆಹಲಿ: ದೇಶವ್ಯಾಪಿ ಲಾಕ್‌ ಡೌನ್ ಕಾರಣದಿಂದಾಗಿ ಶಿಷ್ಟಾಚಾರದ ಪ್ರಕಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರು ಪ್ರಕರಣ ಆಲಿಸಿ ತೀರ್ಪು ನೀಡುತ್ತಿದ್ದರು. ಹೀಗಾಗಿ ಲಾಕ್‌ ಡೌನ್‌ ತೆರವಾಗುವ ವರೆಗೆ ಇದೇ ಮಾದರಿಯಲ್ಲಿ ನ್ಯಾಯಾಲಯದ ಕಾರ್ಯ ಚಟುವಟಿಕೆಗಳನ್ನ ಮುಂದುವರೆಸಲು ಅಪೆಕ್ಸ್‌ ಕೋರ್ಟ್‌ ತೀರ್ಮಾನಿಸಿದೆ. ಜೂನ್‌ 19ರ ವರೆಗೆ ಹೀಗೆ ಮುಂದುವರೆಸಲು ಆದೇಶ ಹೊರಡಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯ ಕರೋನಾ ಮತ್ತು ಲಾಕ್‌ ಡೌನ್‌ ಕಾರಣದಿಂದಾಗಿ ನ್ಯಾಯಾಧೀಶರ ಬೇಸಿಗೆ ರಜೆ ರದ್ದು ಪಡಿಸಿತ್ತು. ಹೀಗಾಗಿ ಮೇ 18 ಅಂದರೆ ಸೋಮವಾರದಿಂದ ಬೇಸಿಗೆ ರಜೆ ತೆಗೆದುಕೊಳ್ಳಲು ಹೇಳಲಾಗಿತ್ತು. ಅದರೀಗ ಅದನ್ನೂ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌ ಜೂನ್‌ 19ರ ವರೆಗೆ ಪ್ರಕರಣಗಳನ್ನ ಆಲಿಸಿ ತೀರ್ಪು ನೀಡಲಿದೆ. ಈಗಾಗಲೇ ಲಾಕ್‌ ಡೌನ್‌ ನಿಂದಾಗಿ ಹಲವು ಪ್ರಕರಣಗಳು ಕೋರ್ಟಿನ ಮೆಟ್ಟಿಲೇರಿದ್ದು, ತೀರ್ಪು ಹೊರ ಬೀಳಲು ಬಾಕಿ ಇದೆ. ಇನ್ನು ದೆಹಲಿ, ಗುಜರಾತ್‌, ಬಾಂಬೆ, ಮದ್ರಾಸ್‌ ಹೈ ಕೋರ್ಟ್‌ ತಮ್ಮ ಬೇಸಿಗೆ ರಜೆ ರದ್ದುಗೊಳಿಸಿರೋದಾಗಿ ಈ ಹಿಂದೆಯೇ ಹೇಳಿತ್ತು. ಇದೀಗ ಸುಪ್ರೀಂ ಕೋರ್ಟ್‌ ಕೂಡ ತಮ್ಮ ರಜೆಯನ್ನು ರದ್ದುಗೊಳಿಸಿ ಜೂನ್‌ 19ರ ವರೆಗೆ ಕಾರ್ಯನಿರ್ವಹಿಸಲಿದೆ.

Leave a Reply

Your email address will not be published. Required fields are marked *

You May Also Like

ಗುಲಗಂಜಿಕೊಪ್ಪ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಬಿಜೆಪಿಯಿಂದ ಎಂಎಲ್ಸಿ ಆಗಬೇಕಂತಾರಾ ವಾಟಾಳ್ ನಾಗರಾಜ್..?

ನ್ನಡಪರ ಹೋರಾಟಗಾರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಿಜೆಪಿ ಸೇರ್ತಾರಾ..? ಹೀಗೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ.