ಮಸ್ಕಿ: ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ರಾಯಚೂರು ಜಿಲ್ಲೆಯ ಮಸ್ಕಿಯ ಅಟೋ ಚಾಲಕ ಸಿದ್ದು ಮುರಾರಿ ಕೊರೋನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಈ ಕಾರ್ಯಕ್ಕೆ ಉಚಿತವಾಗಿ ಆಟೋ ಜೊತೆಗೆ ತಾವು ಕೂಡ ತೊಡಗಿಕೊಂಡಿದ್ದಾರೆ. ಲಾಕ್ ಡೌನ್ ಪರಿಣಾಮ ಈಗಾಗಲೇ ಕಳೆದ ಎರಡು ತಿಂಗಳಿಂದ ವಾಹನ ಸಂಚಾರ ಬಂದ್ ಆಗಿದ್ದರಿಂದ ಅಟೋ ಚಾಲಕರಂತೂ ಬಹಳಷ್ಟು ತೊಂದರೆಗೆ ಒಳಗಾಗಿದ್ದಾರೆ.

ಚಾಲಕರಿಗೆ ಕೆಲಸ ಇಲ್ಲದೇ ಪರಿತಪಿಸಿದ್ದನ್ನು ಎಲ್ಲೆಡೆ ಕಂಡಿದ್ದೇವೆ. ಆದರೆ ಸಿದ್ದು ಮುರಾರಿ ಅವರು ಕೊರೊನಾ ವೈರಸ್ ಜಾಗೃತಿ ಅಭಿಯಾನಕ್ಕೆ ಉಚಿತ ಆಟೋ ಸೇವೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಕೋವಿಡ್-19 ನಿಂದಾಗಿ ಭಾರತ ದೇಶಕ್ಕೆಬಡಜನರ, ನಿರ್ಗತಿಕರ ಹಾಗೂ ಆಟೋ ಚಾಲಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಆಟೋಗಳಿಗೆ ಕೆಲಸ ಇಲ್ಲದೆ ಕೈಕಟ್ಟಿಕೊಂಡು ಬಹುತೇಕ ಆಟೋ ಚಾಲಕರು ಮನೆಯಲ್ಲಿಯೇ ಕುಳಿತುಕೊಂಡಿದ್ದಾರೆ. ಇದು ಅವರಿಗೆ ಅನಿವಾರ್ಯವೂ ಆಗಿದೆ. ದುಡಿಮೆಯೇ ಇಲ್ಲದೇ ಏನು ಮಾಡಬೇಕು ಎನ್ನುವ ಚಿಂತೆಯಲ್ಲಿ ಬಹುತೇಕ ಅಟೋ ದುಡಿಮೆಯನ್ನು ನಂಬಿಕೊಂಡವರು ಅಸಹಾಯಕರಾಗಿದ್ದಾರೆ. ಆದರೆ ಸಿದ್ದು ಮಾತ್ರ ತನ್ನ ಸಂಕಷ್ಟ ಹಾಗೂ ನೋವು ನುಂಗಿ ಕೊರೋನಾದ ಈ ಸಂಕಷ್ಟದಲ್ಲಿ ಈ ಸೇವಾ ಕಾರ್ಯದಲ್ಲಿ ತೊಡಗಿದ್ದಾರೆ.

ಅಟೋ ಚಾಲಕ ಸಿದ್ದು ಮುರಾರಿ

ಕೂಲಿ ಕೆಲಸ ಇಲ್ಲದೇ ಕಳೆದ ಒಂದು ತಿಂಗಳಿನಿಂದ ಆಟೋ ಚಾಲಕರು ಒದ್ದಾಡುವಂತಾಗಿದೆ. ಇವರ ಸಂಕಷ್ಟವನ್ನು ಕಂಡು ಸರಕಾರವೇ ಆಟೋ ಚಾಲಕರಿಗೆ ಪರಿಹಾರ ನೀಡಲು ಮುಂದಾಗಿದೆ. ಇಂತಹ ವೇಳೆಯಲ್ಲಿ ಮಸ್ಕಿಯ ಆಟೋ ಚಾಲಕ ಸಿದ್ದು ಮುರಾರಿ ಅವರು ಕೊಂಚ ಭಿನ್ನ. ಇಲ್ಲಿನ ಅಭಿನಂದನ ಶಿಕ್ಷಣ ಸಂಸ್ಥೆಯವರು ಹಮ್ಮಿಕೊಂಡಿದ್ದ ಮಾಸ್ಕ್ ವಿತರಣೆ ಹಾಗೂ ಕೊರೊನಾ ಜಾಗೃತಿ ಅಭಿಯಾನಕ್ಕೆ ತನ್ನ ಆಟೋವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉಚಿತವಾಗಿ ಆಟೋ ಸೇವೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯ ಪ್ರಶಂಸೆಗೆ ಪಾತ್ರರಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-2

ಶಿಕ್ಷಕಿ ಶಿಲ್ಪಾ ಮ್ಯಾಗೇರಿ. ಹವ್ಯಾಸ ಬರಹದ ಮೂಲಕ ಕಾವ್ಯ ಕಟ್ಟುವ ಕಸೂತಿಯನ್ನು ಕರಗತ ಮಾಡಿಕೊಂಡ ಶಿಕ್ಷಕಿ ಶಿಲ್ಪಾ ಎಮ್.ಎ, ಬಿಇಡಿ ಪದವಿ ಪಡೆದಿದ್ದಾರೆ. ಇವರು ಭಾರತಾಂಬೆ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶ ಪಡೆದರು. ಮಾತು ಮೌನದ ನಡುವೆ ಕವನ ಸಂಕಲನ ಹಾಗೂ ಆಕಾಶಕ್ಕೊಂದು ಏಣಿ ಚುಟುಕು ಸಂಕಲನ ಇವರ ಇನ್ನೆರಡು ಸಂಕಲನಗಳು. ಬೆಳಗಾವಿಯ ಹೊಂಬೆಳಕು ಸಾಂಸ್ಕೃತಿಕ ಸಂಘ ನೀಡುವ ರಾಷ್ಟ್ರ ಕೂಟ ಸಾಹಿತ್ಯಶ್ರೀ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೈತರಿಂದ ತರಾಟೆಗೆ

ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.