ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಸಿಳಿದರು.
ಕೊರೊನಾ ಸೋಂಕಿಗೆ ಹೊಸ ಚಿಕಿತ್ಸೆಯಾಗಿರುವ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು ಇದೊಂದು ಹೊಸ ಚಿಕಿತ್ಸೆಯಾಗಿದೆ. ಕೊರೊನ ಪಾಸಿಟಿವ್ ಆಗಿ ಅದರಿಂದ ಗುಣಮುಖರಾಗಿರುವವರಿಂದ ಪ್ಲಾಸ್ಮಾವನ್ನು ತೆಗೆದುಕೊಂಡು ಕೊರೊನ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ಮಾಡುವ ವಿಧಾನ ಇದಾಗಿದೆ.

ಬೆಂಗಳೂರಿನ 5 ಜನ ದಾನಿಗಳಿಂದ ಪ್ಲಾಸ್ಮಾ ಪಡೆದುಕೊಳ್ಳಲಾಗಿದೆ. ಈ ಚಿಕಿತ್ಸೆ ಮಾಡುವ ವೇಳೆ ಚಿಕಿತ್ಸೆಗೊಳಗಾಗುವ ರೋಗಿಯ ಒಪ್ಪಿಗೆ ಪಡೆದುಕೊಂಡು ಚಿಕಿತ್ಸೆ ಮಾಡಬೇಕಾಗಿದೆ ಎಂದು ಹೇಳಿದರು.

ಆಂದ್ರಮೂಲದ ವ್ಯಕ್ತಿಯೊಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನ ಪಾಸಿಟಿವ್ ನೊಂದಿಗೆ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದರು. ವೈದ್ಯರು ಇವರಿಗೆ ಕೊನೆಯ ಕ್ಷಣದಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಗಾಗಿ ಇವರಿಂದ ಅನುಮತಿ ಪಡೆದು ಚಿಕಿತ್ಸೆ ಕೈಗೊಂಡರು. ಚಿಕಿತ್ಸೆಯಿಂದ ಚೇತರಿಕೆಯನ್ನು ಕಂಡರು. ದುರಾದೃಷ್ಟ ವಶಾತ್ ಆ ವ್ಯಕ್ತಿ ಹೃದಯಾಘಾತದಿಂದ ಮೃತಪದ್ದಾರೆ. ಅವರು ಮೃತಪಟ್ಟಿರುವುದು ಪ್ಲಾಸ್ಮಾ ಥೆರಪಿಯ ವೈಫಲ್ಯವಲ್ಲ. ಇದು ಪ್ಲಾಸ್ಮಾ ಥೆರಪಿಯ ಸೋಲಲ್ಲ. ಪ್ಲಾಸ್ಮಾ ಥೆರಪಿಯ ಬಗ್ಗೆ ಕೆಲವು ಚಿಕಿತ್ಸೆಗಳಾದ ಬಳಿಕ ಅದರ ಮೇಲೆ ನಾವು ತೀರ್ಪುಕೊಡಬೇಕು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ಪೊಲೀಸ್ ಠಾಣೆಯೇ ದೇವಸ್ಥಾನವಿದ್ದಂತೆ : ಪೂಜೆ ಸಲ್ಲಿಸಿ ಗೌರವ

ಪೊಲೀಸರೆ ದೇವರು, ಪೊಲೀಸ್ ಠಾಣೆಯೇ ದೇವಸ್ಥಾನ ಎನ್ನುವ ಕಲ್ಪನೆಯೊಂದಿದೆ ಪೊಲೀಸ್ ಠಾಣೆಗೆ ಪೂಜೆ ಸಲ್ಲಿಸಿ ಈ ಮೂಲಕ ಕೊರೋನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಯಿತು.

ಗದಗ ಜಿಲ್ಲೆಯಲ್ಲಿಂದು 04 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 232…

ಹಠಯೋಗಿ ಶ್ರೀ ಕೋಡಿಕೊಪ್ಪದ ಹುಚ್ಚೀರಪ್ಪಜ್ಜನವರು

ಕನ್ನಡ ನಾಡಿನ ಪುಣ್ಯವೋ ಏನೋ ಅನೇಕ ಜನ ತಪಸ್ವಿಗಳು, ಯೋಗಿಗಳು, ಶರಣರು, ಸಿದ್ಧರು, ಹಠಯೋಗಿಗಳು ಮೊದಲಾದ ಮಹಾಮಹಿಮರು ಉದಯಿಸಿ