ನವದೆಹಲಿ: ನಾಳೆ ಮೂರನೇ ಹಂತದ ಲಾಕ್ ಡೌನ್ ಗೆ ಕೊನೆಯ ದಿನ. ಹೀಗಾಗಿ ನಾಲ್ಕನೇ ಹಂತದ ಲಾಕ್ ಡೌನ್ ಬಗ್ಗೆ ಜನರು ಚಿಂತಿಸುತ್ತಿದ್ದಾರೆ.

ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಇದು ವಿಭಿನ್ನವಾಗಿ ಇರಲಿದೆ ಎಂದು ಹೇಳಿದ್ದಾರೆ. ಹೀಗಾಗಿ ಜನರು ಈ ಕುರಿತು ಚರ್ಚೆ ನಡೆಸುತ್ತಿದ್ದಾರೆ. ನಾಲ್ಕನೇ ಹಂತದ ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪರಿಷ್ಕೃತ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಎಲ್ಲ ಆರ್ಥಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬಹುದು. ಬಸ್ ಸಂಚಾರಕ್ಕೆ ಅನುಮತಿ ಸಿಗಬಹುದು. ರೆಡ್ ಝೋನ್ ನಲ್ಲಿ ಆಟೋ, ಕ್ಯಾಬ್ ಗೆ ಅವಕಾಶ ನೀಡಬಹುದು. ಹಂತ ಹಂತವಾಗಿ ರೈಲು, ದೇಶಿಯ ವಿಮಾನ ಯಾನಕ್ಕೆ ಅವಕಾಶ ಸಿಗಬಹುದು. ಮೆಟ್ರೋ, ಲೋಕಲ್ ರೈಲಿಗೆ ಷರತ್ತುಬದ್ಧ ಅನುಮತಿ ಸಿಗಬಹುದು. ರೆಡ್ ಝೋನ್ ನಲ್ಲಿ ಸಲೂನ್, ಸ್ಪಾಗೆ ಅನುಮತಿ ಸಿಗಬಹುದು. ಐಟಿ, ಎಂಎನ್ಸಿ ಕಂಪನಿಗಳಲ್ಲಿ ಪೂರ್ಣ ಸಿಬ್ಬಂದಿಯೊಂದಿಗೆ ಕೆಲಸ ಮಾಡುವಂತೆ ಸೂಚಿಸಬಹುದು. ರಾತ್ರಿ ಸಂಚಾರದ ಮೇಲಿನ ಕರ್ಫ್ಯೂ ತೆರವು ಮಾಡಬಹುದು.

ಶಾಪಿಂಗ್ ಮಾಲ್, ಕಾಂಪ್ಲೆಕ್ಸ್, ಸ್ಪೋರ್ಟ್ಸ್, ಥಿಯೇಟರ್, ದೇಗುಲ, ಜಾತ್ರೆ, ಸಂತೆ, ಉತ್ಸವ ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ಕಾರ್ಯಕ್ರಮ ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಬಹುದು. ಮೇ ಬಳಿಕವಷ್ಟೇ ಶಾಲಾ-ಕಾಲೇಜು ಆರಂಭ ಮಾಡಬಹುದು.

Leave a Reply

Your email address will not be published. Required fields are marked *

You May Also Like

ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ?

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು…

ಲಿಲ್ಲಿ ಆಗಲು ಸಜ್ಜಾಗಿರುವ ಕನ್ನಡದ ಬುಲ್ ಬುಲ್!

ಬೆಂಗಳೂರು: ಚಂದನವನದ ಬೆಡಗಿ, ಡಿಂಪಲ್ ರಾಣಿ ರಚಿತಾ ರಾಮ್ ಮತ್ತೊಂದು ಲುಕ್ ಗೆ ಸಜ್ಜಾಗಿದ್ದಾರೆ.ಈ ಬುಲ್…

ಹೊರರಾಜ್ಯಗಳಿಂದ ಬಂದವರ ಮನೆಗಳ ಸೀಲ್ಡೌನ್ ಗೆ ಚಿಂತನೆ.!

ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.