ಕೋಲಾರ : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು ನಗರಗಳ ನಿದ್ದೆಗೆಡಿಸಿದೆ. ಸದ್ಯ ಸೋಂಕಿತ ವ್ಯಕ್ತಿಯೊಬ್ಬ ಎಸ್ಕೇಪ್ ಆಗಿದ್ದು, ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಇದರಿಂದಾಗಿ ಇಡೀ ರಾಜ್ಯದಲ್ಲಿ ಆತಂಕ ಮನೆ ಮಾಡಿದೆ.

ಸದ್ಯ ಎಸ್ಕೇಪ್ ಆಗಿದ್ದ ವ್ಯಕ್ತಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಐಸೋಲೇಶನ್ ಮಾಡಲಾಗಿದೆ. ಕೋಲಾರದ ಗಾಂಧಿನಗರದಲ್ಲಿ ವಾಸವಿದ್ದ ಮಂಡ್ಯ ಮೂಲದ ಕೋರ್ಟ್ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡು ಬಂದಿತ್ತು. ಗಂಟಲು ದ್ರವದ ಪರೀಕ್ಷೆ ಬಳಿಕ ಕ್ವಾರಂಟೈನ್ ನಲ್ಲಿರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರು. ಶುಕ್ರವಾರ ಸಂಜೆ ಆತನಿಗೆ ಸೋಂಕು ಬಂದಿರುವುದು ದೃಢಪಟ್ಟಿತ್ತು. ಹೀಗಾಗಿ ಆತನನ್ನ ಐಸೋಲೇಷನ್ ವಾರ್ಡಿಗೆ ಕರೆ ತರಲು ಅಧಿಕಾರಿಗಳು ಸೋಂಕಿತನ ಮನೆಗೆ ಹೋದಾಗ ಆತ ಮನೆಯಲ್ಲಿ ಇರಲಿಲ್ಲ. ಆನಂತರ ಆತ ಸಿಕ್ಕಿದ್ದು ಬೆಂಗಳೂರಿನಲ್ಲಿ.

ಸೋಂಕಿತನ ಟ್ರಾವೆಲ್ ಹಿಸ್ಟರಿ ಮೂರು ನಗರಗಳ ನಿದ್ದೆಗೆಡಿಸಿದೆ. ಸೋಂಕಿತ ಮಂಡ್ಯದ ಮದ್ದೂರಿಗೆ ಭೇಟಿ ನೀಡಿದ್ದ. ಸೋಂಕಿತ ಕಳೆದ ಮೇ. 11ರಂದು ಕೋಲಾರ ನಗರಕ್ಕೆ ಮರಳಿ ಬಂದಿದ್ದ. ಅಂದೇ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ವರದಿಗೂ ಮುನ್ನವೇ ಕೋಲಾರ, ಬೆಂಗಳೂರಿನಲ್ಲಿ ಓಡಾಟ ನಡೆಸಿದ್ದ. ಸೋಂಕು ತಗುಲಿರುವುದು ಶುಕ್ರವಾರದ ವರದಿಯಲ್ಲಿ ದೃಢವಾಗಿದೆ. ಆದರೂ ಕೋಲಾರದಿಂದ ಬೆಂಗಳೂರಿನ ಜೆ.ಪಿ ನಗರದಲ್ಲಿ ಪ್ರತ್ಯಕ್ಷವಾಗಿದ್ದಾನೆ.

ಸೋಂಕಿತ ಬೆಂಗಳೂರಿಗೆ ಬಂದಿದ್ದು ಹೇಗೆ ಎಂಬುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ. ಕೋಲಾರ, ಬೆಂಗಳೂರಲ್ಲಿ ಯಾರನ್ನು ಸಂಪರ್ಕಿಸಿದ್ದ. ಅನ್ನೋದನ್ನು ಸೋಂಕಿತ ಸರಿಯಾಗಿ ಬಾಯಿಬಿಟ್ಟಿಲ್ಲ. ಇದರಿಂದ ಆರೋಗ್ಯಾಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.

ಆಗಸ್ಟ್ ನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅನುಮತಿ

ಕೊರೊನಾ ತಡೆಯಲು ಲಾಕ್ ಡೌನ್ ಸಂದರ್ಭದಲ್ಲಿ ವಿಮಾನ ಸಂಚಾರವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಈ ನಡುವೆ ದೇಶೀಯ ವಿಮಾನ ಯಾನಕ್ಕೆ ಅವಕಾಶವನ್ನೂ ನೀಡಿದೆ. ಆದರೆ, ಆಗಸ್ಟ್ ತಿಂಗಳಿನಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶವನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…