ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904 ಜನರಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ.

ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 85 ಸಾವಿರ ಗಡಿ ದಾಟಿದೆ. ಈ ಮೂಲಕ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ.

ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪೈಕಿ 11ನೇ ಸ್ಥಾನಕ್ಕೆ ಏರಿಕೆ ಕಂಡಿದೆ. 1.16ಲಕ್ಷ ಸೋಂಕಿತರು ಇರುವ ಇರಾನ್ 10ನೇ ಸ್ಥಾನದಲ್ಲಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪ್ರತಿನಿತ್ಯ ಪತ್ತೆಯಾಗುತ್ತ ಹೋದರೆ, ಇರಾನ್ ದೇಶವನ್ನೂ ಭಾರತ ಹಿಂದಿಕ್ಕುವ ದಿನಗಳು ತೀರಾ ದೂರವೇನೂ ಇಲ್ಲ.

2019ರ ನ.17ರಂದು ಚೀನಾದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿತ್ತು. ಈ ನಡುವೆ ಮೃತರ ಸಂಖ್ಯೆಯಲ್ಲಿ ಭಾರತದ ಚೀನಾ ಮಟ್ಟಕ್ಕೆ ತಲುಪಿಲ್ಲ ಎಂಬುವುದು ತುಸು ಸಮಾಧಾನಕರ ವಿಚಾರವಾಗಿದೆ.

Leave a Reply

Your email address will not be published. Required fields are marked *

You May Also Like

ಪಿಯು ಪರೀಕ್ಷೆಗೆ ನಿಯಮವೇನು?

ಬೆಂಗಳೂರ: ಇದೆ ಜೂ.18 ರಂದು ನಡೆಯಲಿರುವ ಪಿಯು ಇಂಗ್ಲೀಷ್ ಪರೀಕ್ಷೆ‌ ನಡೆಯಲಿದೆ. ಪರೀಕ್ಷೆಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮ್ಮ ಊರು ಅಥವಾ ಸಮೀಪದ ಊರುಗಳಲ್ಲೆ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಅವಕಾಶ ನೀಡಿದೆ. ತಮ್ಮ ಹೆಸರು ಇರುವ ಆನ್ ಲೈನ್ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಆಯ್ಕೆ ಮಾಡಿಕೊಂಡ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಈ ಬಗ್ಗೆ ಇಂದು ರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದ್ದು ಜೂ.7 ರ ಒಳಗಾಗಿ ಹೊರರಾಜ್ಯದ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹೊರಬೀಳಲಿದೆ.

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.

ಮಸೀದಿ, ದರ್ಗಾಗಳು ಅನುಸರಿಸಬೇಕಾದ ಕ್ರಮಗಳೇನು?

ಬೆಂಗಳೂರು: ಲಾಕ್ ಡೌನ್ ಸಡಿಲಗೊಳಿಸಿದ ಪರಿಣಾಮ ಮಸೀದಿ ಹಾಗೂ ದರ್ಗಾಗಳಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ…