ಬೆಂಗಳೂರು: ದೆಹಲಿ ಯಿಂದ ಗುರುವಾರ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ವಿಶೇಷ ರೈಲು ಬಂದಿದ್ದು, ಇಂದು ಮತ್ತೊಂದು ರೈಲು ಬಂದಿದೆ.

ಗುರುವಾರ ರಾತ್ರಿ ನವದೆಹಲಿಯಿಂದ ಬಿಟ್ಟಿದ್ದ ಶ್ರಮಿಕ್ ಎಕ್ಸ್ ಪ್ರೆಸ್ ಇಂದು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದೆ. ಈ ಮೂಲಕ ರೈಲು ಸಂಚಾರ ಆರಂಭಗೊಂಡ ಬಳಿಕ ಎರಡನೇ ವಿಶೇಷ ರೈಲು ಬೆಂಗಳೂರಿಗೆ ಬಂದಿದೆ. ಎರಡನೇ ಹಂತದಲ್ಲಿ ದೆಹಲಿಯಿಂದ 601 ಜನ ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದಾರೆ.

ಇಂದು ಬೆಳಿಗ್ಗೆ 6.40ಕ್ಕೆ ಬೆಂಗಳೂರು ಕೆಎಸ್ಆರ್ ರೈಲ್ವೆ ನಿಲ್ದಾಣ ತಲುಪಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅಲ್ಲದೆ ಅಧಿಕಾರಿಗಳು ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿದ್ದಾರೆ.

ದೆಹಲಿಯಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರು ಕಡ್ಡಾಯ ಕ್ವಾರಂಟೈನ್ಗೆದ ಒಳಪಡಬೇಕು. ಹೀಗಾಗಿ ಪ್ರಯಾಣಿಕರು ಇಚ್ಚಿಸುವ ಬೆಂಗಳೂರಿನ ವಿವಿಧ ಸ್ಟಾರ್ ಹೊಟೇಲ್, ಹಾಸ್ಟೆಲ್ ಮತ್ತು ಪಿಜಿಗಳಲ್ಲಿ ಕ್ವಾರಂಟೈನ್ ಗೆ ವ್ಯವಸ್ಥೆ ಮಾಡಲಾಗಿದೆ. ಇತ್ತ ಪೊಲೀಸರು ಪ್ರಯಾಣಿಕರ ಕುಟುಂಬಸ್ಥರು ಮತ್ತು ಯಾರನ್ನೂ ರೈಲ್ವೆ ನಿಲ್ದಾಣದ ಒಳಗೆ ಬಿಡದ ಬ್ಯಾರಿಕೇಡ್ ಹಾಕಿ ಭದ್ರತೆ ಕೈಗೊಂಡರು. ಗುರುವಾರ ನಡೆದ ಗೊಂದಲ ಮತ್ತು ಗಲಾಟೆ ಮರುಕಳಿಸದಂತೆ ಪೊಲೀಸರು ಇಂದು ಎಚ್ಚರಿಕೆ ವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಬೀದರ್ ಗೆ ಮಹಾರಾಷ್ಟ್ರ ಕಂಟಕ….ಧಾರವಾಡಕ್ಕೆ ದೆಹಲಿ ಕಂಟಕ!!

ಧಾರವಾಡ: ಬೀದರ್ ನಲ್ಲಿ ಗರ್ಭಿಣಿ ಸೇರಿದಂತೆ 6 ಜನರಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ಕೂಡ ಇಂದು…

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…