ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೊಲೆ ಮಾಡಿರುವ ವ್ಯಕ್ತಿ ಸೈಕೋ ಎನ್ನಲಾಗಿದೆ. ಈತನ ಹೆಸರು ಮನೀಶ್ ಕುಮಾರ್. ಈ ವ್ಯಕ್ತಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಹಾರಿ ಮೂಲದ ಮನೀಶ್ ಕುಮಾರ್ ಸಂಧ್ಯಾ ಎಂಬುವವರನ್ನು ಮದುವೆಯಾಗಿದ್ದ.

ಎರಡು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ಕೂಡ್ಲು ಗೇಟ್ ಮಹಡಿಯಲ್ಲಿ ಈ ದಂಪತಿ ವಾಸವಿದ್ದರು. ಆದರೆ ಮನೀಷ್ ಕುಮಾರ್‌ಗೆ ಹುಡುಗಿಯೊಬ್ಬಳ ಪರಿಚಯವಾಗಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ಹೆಂಡತಿಗೆ ಗೊತ್ತಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು.

ಕಳೆದ 2 ದಿನದ ಹಿಂದೆ ಹಿಂದೆ ಈ ಜಗಳ ತಾರಕಕ್ಕೇರಿದ್ದು ಸಂಧ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಸೈಕೋನಂತಾಗಿದ್ದ ಮನೀಶ್ ಕುಮಾರ್, ಬಳಿಕ ಆಕೆ ಹೆಣವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಸಂಧ್ಯಾಳಿಗೆ ಆಕೆ ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದರು. ಆದರೆ ಎರಡು ದಿನಗಳಿಂದ ಸಂದ್ಯಾ ಫೋನ್ ಕರೆ ಸ್ವೀಕರಿಸದ ಪರಿಣಾಮ ಆ ಸಂಬಂಧಿಕರೆಲ್ಲ ಮನೆಗೆ ಬಂದಿದ್ದಾರೆ. ಹೀಗಾಗಿ ಸಂಬಂಧಿಕರು ಬಂದಿದ್ದನ್ನು ಕಂಡು ಹೆದರಿ ಮನೀಶ್ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೀದಿಗೆ ಬಂದ ಕಾರ್ಮಿಕರು…!

ಲಾಕ್ ಡೌನ್ ನಿಂದ ಬಡವರ ಬದುಕು ಬೀದಿಗೆ ಬಂದು ನಿಂತಿದೆ. ಸಕ್ಕರೆ ಕಾರ್ಖಾನೆಯೊಂದರ 350ಕ್ಕೂ ಹೆಚ್ಚು ಕಾರ್ಮಿಕರು ಸದ್ಯ ಇದರಿಂದಾಗಿ ಬೀದಿಗೆ ಬಂದಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು..?

ಬೆಂಗಳೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಕೊರೊನಾಗೆ…