ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೊಲೆ ಮಾಡಿರುವ ವ್ಯಕ್ತಿ ಸೈಕೋ ಎನ್ನಲಾಗಿದೆ. ಈತನ ಹೆಸರು ಮನೀಶ್ ಕುಮಾರ್. ಈ ವ್ಯಕ್ತಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಹಾರಿ ಮೂಲದ ಮನೀಶ್ ಕುಮಾರ್ ಸಂಧ್ಯಾ ಎಂಬುವವರನ್ನು ಮದುವೆಯಾಗಿದ್ದ.

ಎರಡು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ಕೂಡ್ಲು ಗೇಟ್ ಮಹಡಿಯಲ್ಲಿ ಈ ದಂಪತಿ ವಾಸವಿದ್ದರು. ಆದರೆ ಮನೀಷ್ ಕುಮಾರ್‌ಗೆ ಹುಡುಗಿಯೊಬ್ಬಳ ಪರಿಚಯವಾಗಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ಹೆಂಡತಿಗೆ ಗೊತ್ತಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು.

ಕಳೆದ 2 ದಿನದ ಹಿಂದೆ ಹಿಂದೆ ಈ ಜಗಳ ತಾರಕಕ್ಕೇರಿದ್ದು ಸಂಧ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಸೈಕೋನಂತಾಗಿದ್ದ ಮನೀಶ್ ಕುಮಾರ್, ಬಳಿಕ ಆಕೆ ಹೆಣವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಸಂಧ್ಯಾಳಿಗೆ ಆಕೆ ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದರು. ಆದರೆ ಎರಡು ದಿನಗಳಿಂದ ಸಂದ್ಯಾ ಫೋನ್ ಕರೆ ಸ್ವೀಕರಿಸದ ಪರಿಣಾಮ ಆ ಸಂಬಂಧಿಕರೆಲ್ಲ ಮನೆಗೆ ಬಂದಿದ್ದಾರೆ. ಹೀಗಾಗಿ ಸಂಬಂಧಿಕರು ಬಂದಿದ್ದನ್ನು ಕಂಡು ಹೆದರಿ ಮನೀಶ್ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೇರಿಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳು

ಕೋವಿಡ್ ಸೋಂಕಿನ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ನೀಡಿದ ಕೊವಿಡ್-19 ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಏ.1 ರಂದು ಹೋಳಿ ಹಬ್ಬವನ್ನು ಶಾಂತ ರೀತಿಯಲ್ಲಿ ಸರಳವಾಗಿ ಆಚರಿಸಲು ಡಿವೈಎಸ್‌ಪಿ ಎಸ್.ಕೆ.ಪ್ರಲ್ಹಾದ ತಿಳಿಸಿದ್ದಾರೆ.

ರಾಜ್ಯದಲ್ಲಿಂದು 2496 ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಏರಿಕೆ: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 2496 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44077 ಕ್ಕೆ ಏರಿಕೆಯಾದಂತಾಗಿದೆ.

ಗೋರ ಸೇನಾ ಸಂಘಟನೇ ವತಿಯಿಂದ ಪ್ರತಿಭಟನೆ- ಸಂಗೂರ ಸಕ್ಕರೆ ಕಾರ್ಖಾನೆ:ಲಾರಿ ಹಾಯ್ದು ಒರ್ವ ಕಾರ್ಮೀಕ ಸಾವೂ, ಇಬ್ಬರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿ ಹಾವೇರಿ: ಹಾವೇರಿ ಜಿಲ್ಲೆಯ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ದಿನಾಂಕ:09.01.2022 ರಾತ್ರಿ 2.00 ಗಂಟೆ…

ನೆರೆ ಸಂತ್ರಸ್ಥರ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಇದರಿಂದ ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ಥರಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.