ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಲೆ ಮಾಡಿರುವ ವ್ಯಕ್ತಿ ಸೈಕೋ ಎನ್ನಲಾಗಿದೆ. ಈತನ ಹೆಸರು ಮನೀಶ್ ಕುಮಾರ್. ಈ ವ್ಯಕ್ತಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಹಾರಿ ಮೂಲದ ಮನೀಶ್ ಕುಮಾರ್ ಸಂಧ್ಯಾ ಎಂಬುವವರನ್ನು ಮದುವೆಯಾಗಿದ್ದ.
ಎರಡು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ಕೂಡ್ಲು ಗೇಟ್ ಮಹಡಿಯಲ್ಲಿ ಈ ದಂಪತಿ ವಾಸವಿದ್ದರು. ಆದರೆ ಮನೀಷ್ ಕುಮಾರ್ಗೆ ಹುಡುಗಿಯೊಬ್ಬಳ ಪರಿಚಯವಾಗಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ಹೆಂಡತಿಗೆ ಗೊತ್ತಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು.
ಕಳೆದ 2 ದಿನದ ಹಿಂದೆ ಹಿಂದೆ ಈ ಜಗಳ ತಾರಕಕ್ಕೇರಿದ್ದು ಸಂಧ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಸೈಕೋನಂತಾಗಿದ್ದ ಮನೀಶ್ ಕುಮಾರ್, ಬಳಿಕ ಆಕೆ ಹೆಣವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಸಂಧ್ಯಾಳಿಗೆ ಆಕೆ ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದರು. ಆದರೆ ಎರಡು ದಿನಗಳಿಂದ ಸಂದ್ಯಾ ಫೋನ್ ಕರೆ ಸ್ವೀಕರಿಸದ ಪರಿಣಾಮ ಆ ಸಂಬಂಧಿಕರೆಲ್ಲ ಮನೆಗೆ ಬಂದಿದ್ದಾರೆ. ಹೀಗಾಗಿ ಸಂಬಂಧಿಕರು ಬಂದಿದ್ದನ್ನು ಕಂಡು ಹೆದರಿ ಮನೀಶ್ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.