ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೊಲೆ ಮಾಡಿರುವ ವ್ಯಕ್ತಿ ಸೈಕೋ ಎನ್ನಲಾಗಿದೆ. ಈತನ ಹೆಸರು ಮನೀಶ್ ಕುಮಾರ್. ಈ ವ್ಯಕ್ತಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಹಾರಿ ಮೂಲದ ಮನೀಶ್ ಕುಮಾರ್ ಸಂಧ್ಯಾ ಎಂಬುವವರನ್ನು ಮದುವೆಯಾಗಿದ್ದ.

ಎರಡು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ಕೂಡ್ಲು ಗೇಟ್ ಮಹಡಿಯಲ್ಲಿ ಈ ದಂಪತಿ ವಾಸವಿದ್ದರು. ಆದರೆ ಮನೀಷ್ ಕುಮಾರ್‌ಗೆ ಹುಡುಗಿಯೊಬ್ಬಳ ಪರಿಚಯವಾಗಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ಹೆಂಡತಿಗೆ ಗೊತ್ತಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು.

ಕಳೆದ 2 ದಿನದ ಹಿಂದೆ ಹಿಂದೆ ಈ ಜಗಳ ತಾರಕಕ್ಕೇರಿದ್ದು ಸಂಧ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಸೈಕೋನಂತಾಗಿದ್ದ ಮನೀಶ್ ಕುಮಾರ್, ಬಳಿಕ ಆಕೆ ಹೆಣವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಸಂಧ್ಯಾಳಿಗೆ ಆಕೆ ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದರು. ಆದರೆ ಎರಡು ದಿನಗಳಿಂದ ಸಂದ್ಯಾ ಫೋನ್ ಕರೆ ಸ್ವೀಕರಿಸದ ಪರಿಣಾಮ ಆ ಸಂಬಂಧಿಕರೆಲ್ಲ ಮನೆಗೆ ಬಂದಿದ್ದಾರೆ. ಹೀಗಾಗಿ ಸಂಬಂಧಿಕರು ಬಂದಿದ್ದನ್ನು ಕಂಡು ಹೆದರಿ ಮನೀಶ್ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಆದರಳ್ಳಿ ಜನರಿಗೆ ಕ್ರಷರ್ ಕಾಟ ತಪ್ಪೇ ಇಲ್ವಂತೆ!

ಶಿವಮೊಗ್ಗದಲ್ಲಿ ಕಲ್ಲು ಗಣಿಗಾರಿಕೆಯ ಸ್ಪೋಟದಿಂದಾದ ಕರಾಳ ಘಟನೆಯ ನೆನಪು ಇನ್ನು ಹಸಿಯಾಗಿಯೇ ಇದೆ. ಈ ಮದ್ಯೆ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕಲ್ಲು ಕ್ವಾರಿಗಳಲ್ಲಿ ಸ್ಪೋಟಕ ಬಳಸಿ ಗಣಿಗಾರಿಕೆ ಮಾಡುತ್ತಿರುವುದು ಮುಂದುವರದೇ ಇದೆ.

ಅಕ್ಟೋಬರ್ ನಲ್ಲಿ ಗ್ರಾಪಂ ಚುನಾವಣೆ ?ಜುಲೈ 13ರಿಂದ ಮತದಾರರ ಪಟ್ಟಿ ಪ್ರಕ್ರಿಯೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗಳನ್ನು ಅಕ್ಟೋಬರ್ ನಲ್ಲಿ ನಡೆಸುವ ಸಾಧ್ಯತೆ ಇದ್ದು. ಇದೇ ಜುಲೈ…

ಬಂಗಾಳದಲ್ಲಿ ಕೊರೊನಾದೊಂದಿಗೆ ಚಂಡಮಾರುತದ ಕಾಟ!

ಕೊರೊನಾ ವೈರಸ್ ನ ಹಾವಳಿಯ ಮಧ್ಯೆಯೇ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಅಬ್ಬರಿಸುತ್ತಿದೆ.