ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೊಲೆ ಮಾಡಿರುವ ವ್ಯಕ್ತಿ ಸೈಕೋ ಎನ್ನಲಾಗಿದೆ. ಈತನ ಹೆಸರು ಮನೀಶ್ ಕುಮಾರ್. ಈ ವ್ಯಕ್ತಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಹಾರಿ ಮೂಲದ ಮನೀಶ್ ಕುಮಾರ್ ಸಂಧ್ಯಾ ಎಂಬುವವರನ್ನು ಮದುವೆಯಾಗಿದ್ದ.

ಎರಡು ವರ್ಷದ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬಂದು ಕೂಡ್ಲು ಗೇಟ್ ಮಹಡಿಯಲ್ಲಿ ಈ ದಂಪತಿ ವಾಸವಿದ್ದರು. ಆದರೆ ಮನೀಷ್ ಕುಮಾರ್‌ಗೆ ಹುಡುಗಿಯೊಬ್ಬಳ ಪರಿಚಯವಾಗಿ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಚಾರ ಹೆಂಡತಿಗೆ ಗೊತ್ತಾಗಿ ಮನೆಯಲ್ಲಿ ಜಗಳ ಶುರುವಾಗಿತ್ತು.

ಕಳೆದ 2 ದಿನದ ಹಿಂದೆ ಹಿಂದೆ ಈ ಜಗಳ ತಾರಕಕ್ಕೇರಿದ್ದು ಸಂಧ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಸೈಕೋನಂತಾಗಿದ್ದ ಮನೀಶ್ ಕುಮಾರ್, ಬಳಿಕ ಆಕೆ ಹೆಣವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಸಂಧ್ಯಾಳಿಗೆ ಆಕೆ ಸಂಬಂಧಿಕರು ಫೋನ್ ಕರೆ ಮಾಡುತ್ತಿದ್ದರು. ಆದರೆ ಎರಡು ದಿನಗಳಿಂದ ಸಂದ್ಯಾ ಫೋನ್ ಕರೆ ಸ್ವೀಕರಿಸದ ಪರಿಣಾಮ ಆ ಸಂಬಂಧಿಕರೆಲ್ಲ ಮನೆಗೆ ಬಂದಿದ್ದಾರೆ. ಹೀಗಾಗಿ ಸಂಬಂಧಿಕರು ಬಂದಿದ್ದನ್ನು ಕಂಡು ಹೆದರಿ ಮನೀಶ್ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೊದಲನೇ ಹಂತದ ಚುನಾವಣೆ ಮಪತ್ರಗಳ ಸಲ್ಲಿಕೆ ಅವಧಿ ಮುಕ್ತಾಯ: ಗದಗ ಜಿಲ್ಲೆಯಲ್ಲಿ ಸಲ್ಲಿಕೆಯಾದ ಮತಪತ್ರಗಳ ವಿವರ

ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ನಾಳೆಯಿಂದ ರಾಜ್ಯದಲ್ಲಿ ಬಸ್ ಸಂಚಾರ?: ನಿಯಮಗಳೇನು ಗೊತ್ತಾ?

ಬೆಂಗಳೂರು: ಲಾಕ್ ಡೌನ್ ನಿಂದ ಬಸ್ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಬಸ್…

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…