ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ 293  ಪ್ರಯಾಣಿಕರು ಇಂದು ಮಧ್ಯಾಹ್ನ ಇಲ್ಲಿಯ ರೈಲು ನಿಲ್ದಾಣ ತಲುಪಿದ್ದಾರೆ.

ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತರಾದ ಕೃಷ್ಣಕಾಂತ್, ಎಂ.ಬಿ. ಬಸರಗಿ, ತಹಶೀಲ್ದಾರರಾದ ಶಶಿಧರ್ ಮಾಡ್ಯಾಳ, ಪ್ರಕಾಶ್ ನಾಶಿ, ವಾಕರಸಾಸಂ ಅಧಿಕಾರಿಗಳಾದ ಹೆಚ್.ಆರ್.ರಾಮನಗೌಡರ್, ಅಶೋಕ್ ಪಾಟೀಲ, ರೇಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದೂರದ ಪ್ರಯಾಣದಿಂದ ತವರಿಗೆ ಮರಳಿದ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಿದ್ದಾರೆ.

ಶಿವಮೊಗ್ಗ – 67, ಬೆಳಗಾವಿ-51, ಚಿಕ್ಕಮಗಳೂರು-05, ಉತ್ತರ ಕನ್ನಡ-09, ಕೊಪ್ಪಳ-10, ಚಿತ್ರದುರ್ಗ-12, ದಕ್ಷಿಣ ಕನ್ನಡ-42, ವಿಜಯಪುರ-32, ಹಾವೇರಿ-14, ಬಾಗಲಕೋಟ-13, ಧಾರವಾಡ-32, ಹಾಸನ -5 ಹಾಗೂ ಗದಗ ಜಿಲ್ಲೆಯ ಒಬ್ಬರು ಸೇರಿ ಒಟ್ಟು 293 ಜನರನ್ನು ಆಯಾ ಜಿಲ್ಲಾಡಳಿತಗಳು ಕಳುಹಿಸಿದ್ದ ಸಾರಿಗೆ ಬಸ್ಸುಗಳು ಹಾಗೂ ಇತರ ವಾಹನಗಳ ಮೂಲಕ ಕಳುಹಿಸಿಕೊಡಲಾಯಿತು.

ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಸ್ವತಃ ಅಧಿಕಾರಿಗಳೇ ಮುಂದೆ ನಿಂತು ಸಹಾಯ ಮಾಡಿದ ರೀತಿಗೆ ಜನತೆ ಮೆಚ್ಚುಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರಕ್ಕೆ ಖಡಕ್ ಸಂದೇಶ ರವಾನಿಸಿದ ಲಕ್ಷ್ಮಣ್ ಸವದಿ!

ಬೆಳಗಾವಿ : ಡಿಸಿಎಂ ಲಕ್ಷ್ಮಣ ಸವದಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ತಿರುಗೇಟು ನೀಡಿ, ವಾಗ್ದಾಳಿ ನಡೆಸಿದ್ದಾರೆ.

ಬೈಕ್ ಗೆ ಲಾರಿ ಡಿಕ್ಕಿ: ಎಸ್.ಎಸ್.ಎಲ್.ಸಿ 3 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು…

ಗದಗ ಜಿಲ್ಲೆಯಲ್ಲಿ 307 ಪಾಸಿಟಿವ್: ಕೊರೊನಾದಿಂದ ಮೃತರಾದವರ ವಿವರ

ಗದಗ: ಜಿಲ್ಲೆಯಲ್ಲಿ ಶನಿವಾರ 307 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 23037 ಏರಿಕೆಯಾಗಿದೆ. ಇನ್ನು ಶನಿವಾರ ಕೊರೊನಾ ಸೋಂಕಿನಿಂದ ಐವರು ಸಾವನ್ನಪ್ಪಿದ್ದು ಈ ಮೂಲಕ ವರೆಗೆ 241 ಜನ ಜಿಲ್ಲೆಯಲ್ಲಿ ಸಾವನ್ನಪ್ಪಿದಂತಾಗಿದೆ.

ರಾಜ್ಯದಲ್ಲಿಂದು 267 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 267 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾದಂತಾಗಿದೆ.