ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ 293  ಪ್ರಯಾಣಿಕರು ಇಂದು ಮಧ್ಯಾಹ್ನ ಇಲ್ಲಿಯ ರೈಲು ನಿಲ್ದಾಣ ತಲುಪಿದ್ದಾರೆ.

ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತರಾದ ಕೃಷ್ಣಕಾಂತ್, ಎಂ.ಬಿ. ಬಸರಗಿ, ತಹಶೀಲ್ದಾರರಾದ ಶಶಿಧರ್ ಮಾಡ್ಯಾಳ, ಪ್ರಕಾಶ್ ನಾಶಿ, ವಾಕರಸಾಸಂ ಅಧಿಕಾರಿಗಳಾದ ಹೆಚ್.ಆರ್.ರಾಮನಗೌಡರ್, ಅಶೋಕ್ ಪಾಟೀಲ, ರೇಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದೂರದ ಪ್ರಯಾಣದಿಂದ ತವರಿಗೆ ಮರಳಿದ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಿದ್ದಾರೆ.

ಶಿವಮೊಗ್ಗ – 67, ಬೆಳಗಾವಿ-51, ಚಿಕ್ಕಮಗಳೂರು-05, ಉತ್ತರ ಕನ್ನಡ-09, ಕೊಪ್ಪಳ-10, ಚಿತ್ರದುರ್ಗ-12, ದಕ್ಷಿಣ ಕನ್ನಡ-42, ವಿಜಯಪುರ-32, ಹಾವೇರಿ-14, ಬಾಗಲಕೋಟ-13, ಧಾರವಾಡ-32, ಹಾಸನ -5 ಹಾಗೂ ಗದಗ ಜಿಲ್ಲೆಯ ಒಬ್ಬರು ಸೇರಿ ಒಟ್ಟು 293 ಜನರನ್ನು ಆಯಾ ಜಿಲ್ಲಾಡಳಿತಗಳು ಕಳುಹಿಸಿದ್ದ ಸಾರಿಗೆ ಬಸ್ಸುಗಳು ಹಾಗೂ ಇತರ ವಾಹನಗಳ ಮೂಲಕ ಕಳುಹಿಸಿಕೊಡಲಾಯಿತು.

ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಸ್ವತಃ ಅಧಿಕಾರಿಗಳೇ ಮುಂದೆ ನಿಂತು ಸಹಾಯ ಮಾಡಿದ ರೀತಿಗೆ ಜನತೆ ಮೆಚ್ಚುಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ಕು ಜನರ ಸಾಮೂಹಿಕ ಅಂತ್ಯಸಂಸ್ಕಾರ ಸಂಸ್ಕಾರ ಮಾಡಿದ ಬಿನ್ನಾಳ ಗ್ರಾಮಸ್ಥರು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಒಂದೇ…

ಕರೆಂಟ್ ಬಳಕೆ ಬಗ್ಗೆ ಜನಜಾಗೃತಿ- ಸೌರಶಕ್ತಿ ಬಳಕೆಗೆ ಮುಂದಾಗಿ

ಆಲಮಟ್ಟಿ : ಇಡೀ ಪ್ರಪಂಚದ ಉಸಿರೇ ಕರೆಂಟ್ ಇಂಧನಗಳ ಮೇಲೆ ನಿಂತಿದೆ.ಆ ದಿಸೆಯಲ್ಲಿ ವಿದ್ಯುತ್ತಿನ ಹಿತಮಿತ…

ನಾಳೆ ಕೆರೆ ಹಸ್ತಾಂತರ ಸಮಾರಂಭ ( ಉದ್ಘಾಟನೆಗೆ ವೀರೇಂದ್ರ ಹೆಗ್ಗಡೆಯವರ ಆಗಮನ)

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್, ಸ್ಥಳೀಯ ಪಟ್ಟಣ ಪಂಚಾಯ್ತಿ ಹಾಗೂ ಬಾಲಲೀಲಾ ಮಹಾಂತ ಶಿವಯೋಗಿ ಕೆರೆ ಸಮಿತಿ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.