ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ 293  ಪ್ರಯಾಣಿಕರು ಇಂದು ಮಧ್ಯಾಹ್ನ ಇಲ್ಲಿಯ ರೈಲು ನಿಲ್ದಾಣ ತಲುಪಿದ್ದಾರೆ.

ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತರಾದ ಕೃಷ್ಣಕಾಂತ್, ಎಂ.ಬಿ. ಬಸರಗಿ, ತಹಶೀಲ್ದಾರರಾದ ಶಶಿಧರ್ ಮಾಡ್ಯಾಳ, ಪ್ರಕಾಶ್ ನಾಶಿ, ವಾಕರಸಾಸಂ ಅಧಿಕಾರಿಗಳಾದ ಹೆಚ್.ಆರ್.ರಾಮನಗೌಡರ್, ಅಶೋಕ್ ಪಾಟೀಲ, ರೇಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದೂರದ ಪ್ರಯಾಣದಿಂದ ತವರಿಗೆ ಮರಳಿದ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಿದ್ದಾರೆ.

ಶಿವಮೊಗ್ಗ – 67, ಬೆಳಗಾವಿ-51, ಚಿಕ್ಕಮಗಳೂರು-05, ಉತ್ತರ ಕನ್ನಡ-09, ಕೊಪ್ಪಳ-10, ಚಿತ್ರದುರ್ಗ-12, ದಕ್ಷಿಣ ಕನ್ನಡ-42, ವಿಜಯಪುರ-32, ಹಾವೇರಿ-14, ಬಾಗಲಕೋಟ-13, ಧಾರವಾಡ-32, ಹಾಸನ -5 ಹಾಗೂ ಗದಗ ಜಿಲ್ಲೆಯ ಒಬ್ಬರು ಸೇರಿ ಒಟ್ಟು 293 ಜನರನ್ನು ಆಯಾ ಜಿಲ್ಲಾಡಳಿತಗಳು ಕಳುಹಿಸಿದ್ದ ಸಾರಿಗೆ ಬಸ್ಸುಗಳು ಹಾಗೂ ಇತರ ವಾಹನಗಳ ಮೂಲಕ ಕಳುಹಿಸಿಕೊಡಲಾಯಿತು.

ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಸ್ವತಃ ಅಧಿಕಾರಿಗಳೇ ಮುಂದೆ ನಿಂತು ಸಹಾಯ ಮಾಡಿದ ರೀತಿಗೆ ಜನತೆ ಮೆಚ್ಚುಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರವಾಹ ಭೀತಿ: ಪ್ರವಾಹ ಪೀಡಿತ ಗ್ರಾಮಸ್ಥರು ಬೀಗರ ಮನೆಗೆ ಹೋಗಬೇಕಂತೆ..!

ಮಲಪ್ರಭ ನದಿಯ ಪ್ರವಾಹ ಪೀಡಿತ ಗ್ರಾಮಸ್ಥರು ತಮ್ಮ ಪರಿಚಿತರು ಅಥವಾ ಸಂಬಂಧಿಗಳ ಮನೆಗೆ ಹೋಗಿ ಆಶ್ರಯ ಪಡೆಯಲು ಸ್ವತ: ತಹಶೀಲ್ದಾರ್ ಆದೇಶ ನೀಡಿದ ಘಟನೆ ನಡೆದಿದೆ.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಿಗರಿಗೆ ವಿಶೇಷ ಗಿಫ್ಟ್ ನೀಡಿದ ಆರ್ ಸಿಬಿ ತಂಡ!

ದುಬೈ : ಕನ್ನಡದಲ್ಲಿಯೇ ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ತಿಳಿಸುವುದರೊಂದಿಗೆ ಕನ್ನಡಿಗರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.