ಗದಗ: ಗರ್ಭಿಣಿಯರಿಗೆ ಪೂರೈಸಿದ ಆಹಾರ ಪದಾರ್ಥಗಳನ್ನು ಮನೆಗೆ ಒಯ್ಯುವಾಗ ಅಂಗನವಾಡಿ ಶಿಕ್ಷಕಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಒಂದನೇ ವಾರ್ಡಿನ ಅಂಗನವಾಡಿ ಸಂಖ್ಯೆ 92ರ ಶಿಕ್ಷಕಿ ಈರಮ್ಮ ಮೇಟಿ ಈ ಆರೋಪಕ್ಕೆ ಗುರಿಯಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗರ್ಭಿಣಿಯರಿಗಾಗಿ ನೀಡಿದ ಹೆಸರು ಕಾಳು, ತೊಗರಿ ಬೇಳೆ, ಸಕ್ಕರೆ, ಶೇಂಗಾ ಚಿಕ್ಕಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಅಂಗನವಾಡಿ ಕಾರ್ಯಕರ್ತೆ ಮನೆಗೆ ಒಯ್ಯುತ್ತಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪವಾಗಿತ್ತು. ಹೀಗಾಗಿ ಮನೆಗೆ ಒಯ್ಯುತ್ತಿರುವಾಗ ಗ್ರಾಮಸ್ಥರು ಅಂಗನವಾಡಿ ಶಿಕ್ಷಕಿಯನ್ನು ತಡೆದು ಗ್ರಾಮ ಪಂಚಾಯತಿ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.

ಗರ್ಭಿಣಿಯರಿಗಾಗಿ ಇಲಾಖೆ ವಿತರಿಸಿದ ಆಹಾರ ಸಾಮಾಗ್ರಿಗಳನ್ನು ಶಿಕ್ಷಕಿ ಮನೆಗೆ ಒಯ್ಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಗ್ರಾಮ ಪಂಚಾಯತಿ ಪಿಡಿಓ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಮಾಹಿತಿ ನಿಡಿದ್ದಾರೆ. ತಮ್ಮ ಮೇಲಿನ ಆರೋಪದ ಕುರಿತು ಉತ್ತರಪ್ರಭ ಶಿಕ್ಷಕಿ ಈರಮ್ಮ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

Leave a Reply

Your email address will not be published. Required fields are marked *

You May Also Like

ಗೋವಿಂದಗೌಡ್ರ ಬೇಸರ: ಪ್ರಚಾರಕ್ಕಾಗಿ ಸಣ್ಣತನದ ರಾಜಕೀಯ ಮಾಡಬಾರದು

ಬಿಜೆಪಿ ಮುಖಂಡ ಅನೀಲ್ ಮೆಣಸಿನಕಾಯಿ ಅವರು ಸಣ್ಣತನದ ರಾಜಕಾರಣ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಎಚ್.ಕೆ.ಪಾಟೀಲ್ ಅಭಿಮಾನಿ ಬಳಗದ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದ್ರು.

ಸಾಹಿತ್ಯ ಪರಿಷತ್ತು ಡಿಜಟಲಿಕರಣವಾಗಬೇಕು : ಚನ್ನೆಗೌಡ

ಕನ್ನಡ ಸಾಹಿತ್ಯ ಪರಿಷತ್ತು ಒಂದು ಸಂಸ್ಥೆಯಾಗಿ ಬೆಳೆಯಬೇಕಾಗಿದೆ. ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಚುಣಾಯಿತನಾದರೆ ಸಾಹಿತ್ಯ ಪರಿಷತ್ತನ್ನು ಸಾರ್ವಜನಿಕರಿಗೆ ವಿಶ್ವವಿದ್ಯಾಲಯದಂತೆ ಬೆಳಕು ಚೆಲ್ಲುವ ಕೆಲಸವನ್ನು ಸಾಹಿತ್ಯ ಪರಿಷತ್ತಿನ ಮೂಲಕ ಮಾಡುವೆ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ವಿ.ಸಿ. ಚನ್ನೇಗೌಡ ಹೇಳಿದರು.

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ವಿದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಲಸಿಕೆ ಬಗ್ಗೆ ಮುಖ್ಯ ಮಾಹಿತಿ

ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.