ಗದಗ: ಗರ್ಭಿಣಿಯರಿಗೆ ಪೂರೈಸಿದ ಆಹಾರ ಪದಾರ್ಥಗಳನ್ನು ಮನೆಗೆ ಒಯ್ಯುವಾಗ ಅಂಗನವಾಡಿ ಶಿಕ್ಷಕಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಒಂದನೇ ವಾರ್ಡಿನ ಅಂಗನವಾಡಿ ಸಂಖ್ಯೆ 92ರ ಶಿಕ್ಷಕಿ ಈರಮ್ಮ ಮೇಟಿ ಈ ಆರೋಪಕ್ಕೆ ಗುರಿಯಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗರ್ಭಿಣಿಯರಿಗಾಗಿ ನೀಡಿದ ಹೆಸರು ಕಾಳು, ತೊಗರಿ ಬೇಳೆ, ಸಕ್ಕರೆ, ಶೇಂಗಾ ಚಿಕ್ಕಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಅಂಗನವಾಡಿ ಕಾರ್ಯಕರ್ತೆ ಮನೆಗೆ ಒಯ್ಯುತ್ತಿದ್ದಾರೆ ಎನ್ನುವುದು ಗ್ರಾಮಸ್ಥರ ಆರೋಪವಾಗಿತ್ತು. ಹೀಗಾಗಿ ಮನೆಗೆ ಒಯ್ಯುತ್ತಿರುವಾಗ ಗ್ರಾಮಸ್ಥರು ಅಂಗನವಾಡಿ ಶಿಕ್ಷಕಿಯನ್ನು ತಡೆದು ಗ್ರಾಮ ಪಂಚಾಯತಿ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.

ಗರ್ಭಿಣಿಯರಿಗಾಗಿ ಇಲಾಖೆ ವಿತರಿಸಿದ ಆಹಾರ ಸಾಮಾಗ್ರಿಗಳನ್ನು ಶಿಕ್ಷಕಿ ಮನೆಗೆ ಒಯ್ಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಗ್ರಾಮ ಪಂಚಾಯತಿ ಪಿಡಿಓ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಮಾಹಿತಿ ನಿಡಿದ್ದಾರೆ. ತಮ್ಮ ಮೇಲಿನ ಆರೋಪದ ಕುರಿತು ಉತ್ತರಪ್ರಭ ಶಿಕ್ಷಕಿ ಈರಮ್ಮ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ.ಪಾಟೀಲ್ ಕಿಡಿ

ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಗಲಾಟೆ, ಹೊಡೆದಾಟ, ಗೊಂದಲಗಳೇ ತುಂಬಿವೆ. ಬಿಜೆಪಿ ಸರ್ಕಾರಕ್ಕೆ ಅಥವಾ ಪಕ್ಷದವರಿಗೆ ಜನರ ಹಿತದ ಕಡೆ ಗಮನವೇ ಇಲ್ಲ ಎಂಬುವುದಕ್ಕೆ ಅವರ ರಾಜಕೀಯ ಕಿತ್ತಾಟಗಳೇ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ಹ್ಯಾಂಡ್ ಸಾನಿಟೈಸರ್ ಸ್ಪೋಟವಾಗುವುದು ನಿಜನಾ..?

ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಸ್ವಯಂಪ್ರೇರಿತ ದಹನಕ್ಕೆ ಸಮರ್ಥವಾಗಿರುವುದಿಲ್ಲ ಎಂದು ತಿಳಿದುಬಂದಿದೆ.