ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ಕಾಯ್ದೆ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಹಾಲಿ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಕಾನೂನು ಬದಲಾವಣೆಯಿಂದ ಎಪಿಎಂಸಿಗಳಿಗಿದ್ದ ವಿಶೇಷ ಅಧಿಕಾರ ಮೊಟಕುಗೊಳಿಸಿದಂತಾಗುತ್ತದೆ. ಇರುವ ಕಾನೂನು ಬದಲಾವಣೆಗೆ ಸರ್ಕಾರ ಏಕೆ ಮುಂದಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರದಿಂದ ಎಪಿಎಂಸಿಗಳು ವಂಚಿತವಾಗುತ್ತವೆ. ಇದರಿಂದ ರೈತರ ಶೋಷಣೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ. ರೈತ ವಿರೋಧಿಯಾಗಿ ನಡೆದುಕೊಂಡವರ ಮೇಲೆ ಕ್ರಮ ಕೈಗೊಳ್ಳಲು ಇದರಿಂದ ಸಾದ್ಯವಾಗುವದಿಲ್ಲ. ಈ ಕಾಯ್ದೆಯ ಬದಲಾವಣೆ ಕಳ್ಳ ಸಂತೆಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಕಿಡಿಕಾರಿದ್ರು.

Leave a Reply

Your email address will not be published. Required fields are marked *

You May Also Like

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…