ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ಕಾಯ್ದೆ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಹಾಲಿ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಕಾನೂನು ಬದಲಾವಣೆಯಿಂದ ಎಪಿಎಂಸಿಗಳಿಗಿದ್ದ ವಿಶೇಷ ಅಧಿಕಾರ ಮೊಟಕುಗೊಳಿಸಿದಂತಾಗುತ್ತದೆ. ಇರುವ ಕಾನೂನು ಬದಲಾವಣೆಗೆ ಸರ್ಕಾರ ಏಕೆ ಮುಂದಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರದಿಂದ ಎಪಿಎಂಸಿಗಳು ವಂಚಿತವಾಗುತ್ತವೆ. ಇದರಿಂದ ರೈತರ ಶೋಷಣೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ. ರೈತ ವಿರೋಧಿಯಾಗಿ ನಡೆದುಕೊಂಡವರ ಮೇಲೆ ಕ್ರಮ ಕೈಗೊಳ್ಳಲು ಇದರಿಂದ ಸಾದ್ಯವಾಗುವದಿಲ್ಲ. ಈ ಕಾಯ್ದೆಯ ಬದಲಾವಣೆ ಕಳ್ಳ ಸಂತೆಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಕಿಡಿಕಾರಿದ್ರು.
You May Also Like
ಗಣೇಶೋತ್ಸವ ಆಚರಣೆ ಮಾರ್ಗಸೂಚಿಗಳು: ನಿಯಮ ಪಾಲನೆಗೆ ಡಿಸಿ ಸೂಚನೆ
ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
- ಉತ್ತರಪ್ರಭ
- August 18, 2020
ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ
ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
- ಉತ್ತರಪ್ರಭ
- March 5, 2021