ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರದ ಸೂಚನೆಯಂತೆ ಈ ಕಾಯ್ದೆ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇದಕ್ಕೆ ಹಾಲಿ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಕಾನೂನು ಬದಲಾವಣೆಯಿಂದ ಎಪಿಎಂಸಿಗಳಿಗಿದ್ದ ವಿಶೇಷ ಅಧಿಕಾರ ಮೊಟಕುಗೊಳಿಸಿದಂತಾಗುತ್ತದೆ. ಇರುವ ಕಾನೂನು ಬದಲಾವಣೆಗೆ ಸರ್ಕಾರ ಏಕೆ ಮುಂದಾಗಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರದಿಂದ ಎಪಿಎಂಸಿಗಳು ವಂಚಿತವಾಗುತ್ತವೆ. ಇದರಿಂದ ರೈತರ ಶೋಷಣೆ ಇನ್ನಷ್ಟು ಹೆಚ್ಚಾಗುವ ಸಾದ್ಯತೆ ಇದೆ. ರೈತ ವಿರೋಧಿಯಾಗಿ ನಡೆದುಕೊಂಡವರ ಮೇಲೆ ಕ್ರಮ ಕೈಗೊಳ್ಳಲು ಇದರಿಂದ ಸಾದ್ಯವಾಗುವದಿಲ್ಲ. ಈ ಕಾಯ್ದೆಯ ಬದಲಾವಣೆ ಕಳ್ಳ ಸಂತೆಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಕಿಡಿಕಾರಿದ್ರು.

Leave a Reply

Your email address will not be published. Required fields are marked *

You May Also Like

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ. 

ಕೊರೊನಾ ವೈರಸ್ ತನಿಖೆಗೆ ಒಪ್ಪಿಗೆ ಸೂಚಿಸಿತೆ ಚೀನಾ?

ಕೊರೋನಾ ವೈರಸ್ ಮೂಲದ ಬಗ್ಗೆ ತನಿಖೆಗೆ ಚೀನಾ ಒಪ್ಪಿಕೊಂಡಿದೆಯೇ? ಎಂಬ ಪ್ರಶ್ನೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಿವೋ ಲಿಜಿಯಾನ್ ಪ್ರತಿಕ್ರಿಯಿಸಿದ್ದಾರೆ.