ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ರಂಗಾಪುರ ಗ್ರಾಮದ ವ್ಯಕ್ತಿ ಗಂಗಾಧರ್ (55) ಹಲ್ಲೆಗೊಳಗಾದ ಪತಿ. ಈತನ ಮೇಲೆ ಪತ್ನಿ ತಾರಾ, ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ್ದಾಳೆ.

ಸುಮಾರು ಇಪ್ಪತ್ತು ವರ್ಷಗಳ ಹಿಂದೆಯೇ ಗಂಗಾಧರ್ ಹಾಗೂ ತಾರಾ ವಿವಾಹವಾಗಿದ್ದು, ಅಲ್ಲಿಂದಲೂ ತನ್ನ ಪತಿಗೆ ತಾರಾ ಕಿರುಕುಳ ನೀಡುತ್ತಿದ್ದಳು ಎನ್ನಲಾಗಿದೆ. ಆದರೆ, ಇದನೆಲ್ಲ ಸಹಿಸಿಕೊಂಡ ಗಂಗಾಧರ್ ಮನೆ ಬಿಟ್ಟು ಹೋಗದೆ ಹೆಂಡ್ತಿ ಕಾಟ ಸಹಿಸಿಕೊಂಡು ಸುಮ್ಮನಿದ್ದ.

ಆದರೆ, ಕಳೆದ ರಾತ್ರಿ ಮಾತ್ರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಊಟಕ್ಕೆ ಕುಳಿತ್ತಿದ್ದ ಗಂಗಾಧರ್‌ನ ಮೇಲೆ ಪತ್ನಿ ತಾರಾ ಬಿಸಿ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆ ಮಾಡಲು ಯತ್ನಿಸಿದ್ದಾಳೆ. ಹೀಗಾಗಿ ಘಟನೆಯಲ್ಲಿ ಗಂಗಾಧರ್‌ಗೆ ಮುಖ ಸೇರಿದಂತೆ ದೇಹದ ಕೆಲವು ಭಾಗಗಳು ಸುಟ್ಟು ಹೋಗಿದ್ದು, ಆತನೀಗ ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…

ಪ್ರೌಢ ಶಾಲಾ ಸಹ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ;

ಉತ್ತರಪ್ರಭ ಕೊಪ್ಪಳ: ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ…