ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಯನ್ನು ಟ್ಯಾಕ್ಟರ್ ನಿಂದ ನಾಶ ಮಾಡಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ನಾಗೇನಹಳ್ಳಿ ಅಗ್ರಹಾರ ತಾಂಡಾದಲ್ಲಿ ಕಿರಣ್ ಎಂಬ ರೈತ ಎರಡು ಎಕರೆ ಜಮೀನಿನಲ್ಲಿ ಎಲೆಕೋಸನ್ನು ಬೆಳೆದಿದ್ದರು. ಎರಡು ಎಕರೆ ಎಲೆಕೋಸನ್ನು ಬೆಳೆಯಲು ಸುಮಾರು ಒಂದೂವರೆ ಲಕ್ಷ ರೂಪಾಯಿ ಹಣ ಖರ್ಚು ಮಾಡಿದ್ದರು. ಆದರೆ, ಫಸಲು ಕೂಡ ಉತ್ತಮವಾಗಿತ್ತು. ಎರಡರಿಂದ ಮೂರು ಲಕ್ಷ ಲಾಭದ ನಿರೀಕ್ಷೆ ರೈತನದ್ದಾಗಿತ್ತು. ಆದರೆ ಬೆಳೆ ಕೊಳ್ಳಲು ಯಾರೂ ಮುಂದೆ ಬರದೆ, ದಿನದಿಂದ ದಿನಕ್ಕೆ ಬೆಳೆ ಹಾಳಾಗಿರುವುದನ್ನು ಕಂಡು ಮನನೊಂದ ರೈತ ಕಿರಣ್ ಎರಡು ಎಕರೆಗೂ ಟ್ರ್ಯಾಕ್ಟರ್ ಹೊಡೆಸಿ ಬೆಳೆ ನಾಶ ಮಾಡಿದ್ದಾರೆ.

ಕೊರೊನಾ ಆತಂಕದಿಂದ ದೇಶದಲ್ಲಿ ಲಾಕ್ಡೌನ್ ಜಾರಿ ಮಾಡುವ ಮೊದಲು ಹಾಗೂ ಲಾಕ್ಡೌನ್ ವೇಳೆಯಲ್ಲೂ ಎಲೆಕೋಸಿಗೆ ಉತ್ತಮ ಬೆಲೆ ಇತ್ತು. ಆದರೆ ಲಾಕ್ಡೌ ನ್ ಹಿನ್ನೆಲೆ ಬೆಳೆ ಖರೀದಿಸೋಕೆ ಮಧ್ಯವರ್ತಿಗಳು ಬರಲಿಲ್ಲ. ಬೇರೆ ಯಾರೂ ಖರೀದಿಗೆ ಮುಂದಾಗಿಲ್ಲ. ಇದರಿಂದ ಮನನೊಂದ ರೈತ ಎರಡು ಎಕರೆ ಎಲೆಕೋಸಿಗೂ ಟ್ರ್ಯಾಕ್ಟರ್ ಹೊಡೆಸಿದ್ದಾರೆ. ಜೊತೆಗೆ ಊರಿನ ಕುರಿ-ಮೇಕೆ, ದನ-ಕರುಗಳನ್ನು ಹೊಲದಲ್ಲೇ ಮೇಯಲು ಬಿಟ್ಟು, ಎಲೆಕೋಸನ್ನು ಕತ್ತರಿಸಿ ಹೊಲದಲ್ಲಿಯೇ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮುರುಡಿ ಗ್ರಾಮಕ್ಕೆ 93.33% ರಷ್ಟು ಫಲಿತಾಂಶ

ಉತ್ತರಪ್ರಭ ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ…

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ

ಆಲಮಟ್ಟಿ ಮಳೆಗಾಳಿ ಆರ್ಭಟ- ಧರೆಗುರುಳಿದ ಗಿಡಮರಗಳು

ಆಲಮಟ್ಟಿ: ಇಂದು ಸಂಜೆ 6 ಗಂಟೆಯ ಸುಮಾರಿಗೆ ಗುಡುಗು,ಮಿಂಚು ಮಿಶ್ರಿತ ಭಾರೀ ಗಾಳಿಯೊಂದಿಗೆ ಅರ್ಧಗಂಟೆಗು ಹೆಚ್ಚು…

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು