ಧಾರವಾಡ: ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಕಲಚೇತನನಾಗಿದ್ದ ಉಮೇಶ್ ತ್ರಿಚಕ್ರ ಬೈಕ್ ಮೇಲೆ ಹೊರಟಿದ್ದ ಸಂದರ್ಭದಲ್ಲಿ ಬಂದ ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹತ್ತಿರವೇ ಇದ್ದ ಪತ್ನಿ ಜೋರಾಗಿ ಚೀರಾಡಿ ಜನರನ್ನು ಸೇರಿಸಲು ಪ್ರಯತ್ನಿಸಿದ್ದಾರೆ. ಇದನ್ನು ಕಂಡು ಓರ್ವ ಸುಮಾ ಅವರನ್ನು ಅಟ್ಟಿಸಿಕೊಂಡು ಬಂದಿದ್ದಾನೆ. ಆಗ ಪತ್ನಿ ಸುಮಾ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಮೃತ ಉಮೇಶ್ ಮೇಲೆ ಈ ಹಿಂದೆಯೂ ಕೂಡ ಹಲ್ಲೆಯಾಗಿತ್ತು. ಈ ಹಿನ್ನೆಲೆಯಲ್ಲಿ ಉಮೇಶ್ ತನ್ನ ಮನೆ ಹಾಗೂ ಮನೆ ಸುತ್ತ ಸಿಸಿಟಿವಿ ಅಳವಡಿಸಿದ್ದರು. ಇದೀಗ ಸಿಸಿಟಿವಿಯ ಮೂಲಕ ಅವರ ಕೊಲೆ ರಹಸ್ಯ ಬಯಲಾಗಿದೆ. ಈ ಕುರಿತು ಮೃತನ ಪತ್ನಿ ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.

ನೂತನ 52 ತಾಲೂಕುಗಳಲ್ಲಿ ಬಿಇಒ ಕಚೇರಿ ಮರೀಚಿಕೆ ? ಆರಂಭದ ಸುಳಿವೇ ಇಲ್ಲ ! ಪ್ರಾರಂಭ ಎಂದು ? ಬಿಇಒ ಕಚೇರಿ, ಸಿಬ್ಬಂದಿ ಮಂಜೂರಾತಿಗೆ ಆಗ್ರಹ

ಆಲಮಟ್ಟಿ : ಹೊಸ ಭರವಸೆಯ ಆಶಾ ಕಿರಣದೊಂದಿಗೆ ನೂತನವಾಗಿ ತೆಲೆಯತ್ತಿದ್ದ ರಾಜ್ಯದ 52 ನವ ತಾಲೂಕುಗಳು…