ಧಾರವಾಡ: ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವಿಕಲಚೇತನನಾಗಿದ್ದ ಉಮೇಶ್ ತ್ರಿಚಕ್ರ ಬೈಕ್ ಮೇಲೆ ಹೊರಟಿದ್ದ ಸಂದರ್ಭದಲ್ಲಿ ಬಂದ ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹತ್ತಿರವೇ ಇದ್ದ ಪತ್ನಿ ಜೋರಾಗಿ ಚೀರಾಡಿ ಜನರನ್ನು ಸೇರಿಸಲು ಪ್ರಯತ್ನಿಸಿದ್ದಾರೆ. ಇದನ್ನು ಕಂಡು ಓರ್ವ ಸುಮಾ ಅವರನ್ನು ಅಟ್ಟಿಸಿಕೊಂಡು ಬಂದಿದ್ದಾನೆ. ಆಗ ಪತ್ನಿ ಸುಮಾ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಮೃತ ಉಮೇಶ್ ಮೇಲೆ ಈ ಹಿಂದೆಯೂ ಕೂಡ ಹಲ್ಲೆಯಾಗಿತ್ತು. ಈ ಹಿನ್ನೆಲೆಯಲ್ಲಿ ಉಮೇಶ್ ತನ್ನ ಮನೆ ಹಾಗೂ ಮನೆ ಸುತ್ತ ಸಿಸಿಟಿವಿ ಅಳವಡಿಸಿದ್ದರು. ಇದೀಗ ಸಿಸಿಟಿವಿಯ ಮೂಲಕ ಅವರ ಕೊಲೆ ರಹಸ್ಯ ಬಯಲಾಗಿದೆ. ಈ ಕುರಿತು ಮೃತನ ಪತ್ನಿ ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ಬೆಳಗಾವಿಯಲ್ಲಿ ಗ್ಯಾಂಗ್ ವಾರ್!: ಬರ್ಭರ ಹತ್ಯೆ!

ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಯ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಗ್ಯಾಂಗ್‌ವಾಡಿಯಲ್ಲಿ ತಡರಾತ್ರಿ ನಡೆದಿದೆ.

ಸದಾಶಿವ ಯೋಗ ವರದಿ ವಿಚಾರ ಕಟೀಲ್ ಹೇಳಿಕೆ ಹಿಂಪಡೆಯಲು ಒತ್ತಾಯ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರ ಬದ್ದವಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿರುವ ಹೇಳಿಕೆಯನ್ನು ಹಿಂದೆ ಪಡಿಯಬೇಕು ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಬಂಜಾರ ಸಮಾಜದ ಯುವ ಮುಖಂಡ ರಮೇಶ ಲಮಾಣಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ.

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…