ವಿಜಯಪುರ: ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.

ಇಲ್ಲಿಯ ಶಕ್ತಿ ನಗರ ನಿವಾಸಿ ಸವಿತಾರಾಣಿ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಲ್ಲಿಯವರೆಗೂ ಅವರು ಮನೆಗೆ ತೆರಳಿಲ್ಲ. 15 ತಿಂಗಳ ಹೆಣ್ಣು ಮಗು ಹಾಗೂ 3 ವರ್ಷದ ಗಂಡು ಮಗುವನ್ನು ಅಜ್ಜಿ ಮನೆಯಲ್ಲಿಯೇ ಬಿಟ್ಟು ಸೇವೆ ಮಾಡುತ್ತಿದ್ದಾರೆ.

ಸವಿತಾರಾಣಿ ಪತಿ ಚಂದ್ರಶೇಖರ್ ಮಕ್ಕಳನ್ನು ಭೇಟಿ ಮಾಡಸಲೆಂದು ಹೆರಿಟೇಜ್ ಹೊಟೇಲ್ ಗೆ ಬಂದಿದ್ದರು. ತಾಯಿಯನ್ನು ಕಂಡ ಮಕ್ಕಳು ಅಮ್ಮನಿಗಾಗಿ ಅಳಲಾರಂಭಿಸಿವೆ. ಇತ್ತ ಅಮ್ಮ ಸವಿತಾರಾಣಿ ಕೂಡ ಮಕ್ಕಳನ್ನು ಕಂಡು ಅಪ್ಪಿಕೊಂಡು ಮುದ್ದಾಡಲಾರದೆ ಕಣ್ಣೀರು ಹಾಕಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾಸಿಟಿವಿಟಿ ದರ ಹೆಚ್ಚಿದ್ದಲ್ಲಿ ವಿಶೇಷ ನಿಗಾ ವಹಿಸಿ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನರು ಸೋಂಕು ತೆಡೆಗಟ್ಟುವಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಕೆ ಅವರು ತಿಳಿಸಿದ್ದಾರೆ.

ಗೋಂಧಳಿ ಸಮಾಜಕ್ಕೆ ವಿಶೇಷ ಪ್ಯಾಕೇಜ್ ನೀಡಲು ವಿಠಲ್ ಗಣಾಚಾರಿ ಒತ್ತಾಯ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ 1600 ಕೋಟಿ ರೂಗಳ ವಿಶೇಷ ಪ್ಯಾಕೇಜ್ ನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದು ಅಭಿನಂದನಾರ್ಹ. ಆದರೆ ಈ ಪ್ಯಾಕೇಜಿನಲ್ಲಿ ಗೋಂಧಳಿ ಸಮಾಜಕ್ಕೆ ಹೆಚ್ಚಿನ ನೆರವು ನೀಡಬೇಕು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜ ಸಂಘದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…