ಬೆಂಗಳೂರು: ಇಂದು ಮೂರನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದೆ. ನಾಳೆಯಿಂದ ಹೊಸ ಸ್ವರೂಪದಲ್ಲಿ ಲಾಕ್ಡೌನ್ ಜಾರಿಯಾಗಲಿದೆ.

ಲಾಕ್ಡೌನ್ ಕಠಿಣವಿದ್ದಷ್ಟು ದಿನ ಸೋಂಕಿತರ ಸಂಖ್ಯೆ ಕಡಿಮೆಯಿತ್ತು. ಆದರೆ ಲಾಕ್ಡೌನ್ ಸಡಿಲಿಕೆಯಾದ ನಂತರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆಯೇ ಮೂರನೇ ಹಂತದ ಲಾಕ್ ಡೌನ್ ಮುಗಿಯುತ್ತಿದೆ. ಕಂಟೈನ್ಮೆಂಟ್ ಝೋನ್ ಗಳಿಗಷ್ಟೇ ಲಾಕ್ಡೌನ್ ಎನ್ನಲಾಗುತ್ತಿದೆ.

ನಾಳೆಯಿಂದ ಬೆಂಗಳೂರಿನಲ್ಲಿ ಷರತ್ತುಬದ್ಧವಾಗಿ ಬಿಎಂಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಎಲ್ಲಾ ಬಸ್ ಡಿಪೋಗಳಲ್ಲಿ ಚಾಲಕರು ಹಾಗೂ ನಿರ್ವಾಹಕರ ಫಿಟ್ನೆಸ್ ಪರೀಕ್ಷೆ ನಡೆದಿದೆ.

ನಾಳೆಯಿಂದ ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಮೇ 18ರಿಂದ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಬಸ್ ಗಳ ಜೊತೆಗೆ ಆಟೋ ಓಡಾಟ ನಡೆಸುವ ಸಾಧ್ಯತೆ ಇದೆ. ಟ್ಯಾಕ್ಸಿ, ಓಲಾ, ಊಬರ್ ಓಡಾಡಬಹುದು. ಜಿಮ್, ಸ್ಪಾ, ಸಲೂನ್ ಅಂಗಡಿಗಳಿಗೆ ಅನುಮತಿ ಸಿಗುವ ಸಾಧ್ಯತೆ ಇದೆ.

ಆದರೆ, ಥಿಯೇಟರ್, ಶಾಪಿಂಗ್ ಮಾಲ್, ಕಾಂಪ್ಲೆಕ್ಸ್, ಸ್ಪೋರ್ಟ್ಸ್, ದೇಗುಲ, ಜಾತ್ರೆ, ಸಂತೆ, ಧಾರ್ಮಿಕ ಉತ್ಸವ, ರಾಜಕೀಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇನ್ನೂ ಅನುಮತಿ ಸಿಗದೆ ಇರಬಹುದು.

Leave a Reply

Your email address will not be published. Required fields are marked *

You May Also Like

ಹೊಸ ಶಿಕ್ಷಣ ನೀತಿ ಸಾಕಾರಕ್ಕೆ ಸಹಕಾರ ಅಗತ್ಯ- ಅರುಣ ಶಹಾಪುರ

ವರದಿ: ಗುಲಾಬಚಂದ ಜಾಧವ ಉತ್ತರಪ್ರಭಆಲಮಟ್ಟಿ: ಮೂವತ್ತು ನಾಲ್ಕು ವಸಂತಗಳ ಬಳಿಕ 21 ನೇ ಶತಮಾನ ಕಂಡ…

ಪಾಕ್‍ನಲ್ಲಿ ಬಸ್-ರೈಲು ಢಿಕ್ಕಿ 19 ಸಿಖ್ ಯಾತ್ರಾರ್ಥಿಗಳ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು…

ಡಿಪ್ಲೋಮಾ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಇದೇ ತಿಂಗಳ 15-07-2020 ರಿಂದ 05-08-2020 ರವರೆಗೆ ನಿಗದಿ ಪಡಿಸಲಾಗಿದ್ದ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು…

ಮೆಣಸಿನಕಾಯಿ ಬೆಳೆ ನಾಶಪಡಿಸಿದ ರೈತ

ಮೆಣಸಿನಕಾಯಿ ಬೆಳೆ ಬೆಳೆದು ನಿಂತ ಜಮೀನಿನಲ್ಲಿ ಕುರಿ ಹಾಗೂ ದನಕರುಗಳನ್ನು ಬಿಟ್ಟು ಬೆಳೆಯನ್ನು ನಾಶಪಡಿಸಲಾಗಿದೆ.