ಬೆಂಗಳೂರು: ಈಗಾಗಲೇ ಈ ಹಿಂದೆ ಕೇಂದ್ರದ ಆದೇಶದಂತೆ ಇಂದು ಲಾಕ್ ಡೌನ್ ಮುಕ್ತಾಯವಾಗಬೇಕು. ಆದರೆ ಕೊರೋನಾ ಸೋಂಕು ನಿಂತ್ರಣಕ್ಕೆ ಬಾರದೇ ಇರುವುದರಿಂದ ಸಹಜವಾಗಿ ಕೊರೋನಾ ಸೋಂಕಿನ ಗಂಭೀರತೆ ಒಂದೆಡೆಯಾದರೆ, ಜನಜೀವನದ ಗೋಳಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಲಾಕ್ ಡೌನ್ ಮುಂದುವರಿಕೆ ಕುರಿತು ಸರ್ಕಾರದ ಆದೇಶ

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದ್ದು, ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ ಜಾರಿಯಲ್ಲಿರುವ ಮೂರನೇ ಹಂತದಲ್ಲಿನ ಲಾಕ್ ಡೌನ್ ಮಾರ್ಗಸೂಚಿಯನ್ನೆ ಮುಂದಿನ ಆದೇಶದವರೆಗೆ ಇಲ್ಲವೆ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನನ್ನ ಮಗ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ – ಹುತಾತ್ಮ ಯೋಧನ ತಂದೆ!

ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…

ಸಂಶಯದ ಆಸಾಮಿಯಿಂದ ಪತ್ನಿ, ಮಗನಿಗೆ ಚಾಕು ಇರಿತ

ಉತ್ತರಪ್ರಭ ಸುದ್ದಿ ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಹೆಂಡತಿ, ಆರು ವರ್ಷದ ಮಗನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ…