ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

8,48,169 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ 2879 ಪರೀಕ್ಷಾ ಕೇಂದ್ರಗಳು, 40320 ಕೊಠಡಿಗಳ ಅವಶ್ಯಕತೆ ಇದೆ. ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಪಡೆದು ವಿದ್ಯಾರ್ಥಿಗಳ ನಡುವೆ ಶಾರೀಕ ಅಂತರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಒಬ್ಬ ವಿದ್ಯಾರ್ಥಿಗೆ ಎರಡು ಮಾಸ್ಕ್ ವಿತರಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತದೆ. ಅನಾರೋಗ್ಯದಿಂದ ಬಳಲುತ್ತಿದ್ದರೆ ಅಂತಹ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಇರಲಿದೆ.

ಹಾಸ್ಟೆಲ್ ಗಳಲ್ಲಿದ್ದ ವಿದ್ಯಾರ್ಥಿಗಳಿಗೆ  ಹತ್ತಿರದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ, ಈ ತಿಂಗಳ 25 ರೊಳಗೆ ಸಮೀಪದ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ಸಂಪರ್ಕಿಸಿದರೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ. ವಲಸೆ ಕಾರ್ಮಿಕರ ಮಕ್ಕಳು ಪರೀಕ್ಷಾ ಕೇಂದ್ರ ಬದಲಾವಣೆಗೂ ಅವಕಾಶ ನೀಡಲಾಗಿದೆ.

ಚಂದನ ವಾಹಿನಿಯಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳ ಮೂಲಕ ಉತ್ತರ ಬರೆಯವ ತರಬೇತಿ ನೀಡಲಾಗುತ್ತದೆ. ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮದ್ಯೆದಲ್ಲಿ ಒಂದೋಂದು ದಿನ ಗ್ಯಾಪ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.
ಪಿಯುಸಿಯ ಇಂಗ್ಲೀಷ್ ಪತ್ರಿಕೆಯ ಪರೀಕ್ಷೆ ಜೂನ್ 18 ಕ್ಕೆ ನಡೆಯಲಿದೆ. ಮೌಲ್ಯ ಮಾಪನಕ್ಕೆ ಒಂದು ತಿಂಗಳು ಕಾಲಾವಕಾಶ ಇರಲಿದೆ. ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಮ್ಮ ಸಮೀಪದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

You May Also Like

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ರದ್ದು

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಬಿಗ್ ಶಾಕ್ ನೀಡಿದೆ.

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಹಸಿರು ವಲಯಕ್ಕೂ ವಕ್ಕರಿಸಿದ ಕೊರೊನಾ!

ಕರ್ನಾಟಕಕ್ಕೆ ಕೊರೊನಾ ಎಂಟ್ರಿ ಕೊಟ್ಟರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅದರ ಆಟ ನಡೆದಿರಲಿಲ್ಲ. ಆದರೆ, ಒಂದೇ ದಿನ 8 ಪ್ರಕರಣಗಳು ದಾಖಲಾಗಿದ್ದು, ಜನರು ಆತಂಕದಲ್ಲಿ ಇದ್ದಾರೆ.