ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ‌. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38 ಕ್ಕೆ ಏರಿಕೆಯಾದಂತಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಸಂಭವಿಸಿದ ಮೊದಲ ಸಾವು ಇದಾಗಿದೆ. 61 ವರ್ಷದ ಈ ರೋಗಿ ಕಳೆದ ಒಂದು ವಾರದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ತೆರೆದ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಈತನಿಗೆ ಚಿಕಿತ್ಸೆ ನೀಡಲಾಗಿತ್ತು.
ಕೋಲಾರದಲ್ಲೂ ಶಂಕಿತ ಕೊರೊನಾ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಮಾಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಸಾವಿಗೀಡಾಗಿದ್ದು, ಆತಂಕ ಹೆಚ್ಚಿಸಿದೆ. ಮೃತ ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿನ ನಿಖರ ಕಾರಣ ಪತ್ತೆಯಾಗಲಿದೆ. ಅಂದಹಾಗೆ ಈ ವ್ಯಕ್ತಿ ಮುಂಬೈನಿಂದ ಆಗಮಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಡಿಸಿ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಶರಣ ಧರ್ಮ,ವಚನ ಸಾಹಿತ್ಯ ರಕ್ಷಕ ಮಾಚಿದೇವರು

ನಿಡಗುಂದಿ: ಕಲ್ಯಾಣ ಕ್ರಾಂತಿ ಯಲ್ಲಿ ಮಾಚಿದೇವರು ಶರಣ ಧರ್ಮ ಸಂರಕ್ಷಣೆ- ವಚನ ಸಾಹಿತ್ಯದ ರಕ್ಷಣೆಯ ಜವಾಬ್ಧಾರಿ…

ಕಾಲೇಜ್ ಆರಂಭಕ್ಕೆ ಸರ್ಕಾರದ ಮಾರ್ಗಸೂಚಿ

ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟ ಕಾಲೇಜು ಆರಂಭಗೊಳ್ಳುತ್ತಿವೆ‌. ಹೀಗಾಗಿ ಕಾಲೇಜು ಆರಂಭಗೊಳ್ಳುತ್ತಿರುವ ಹಿನ್ನೆಲೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನದ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.