ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ 127 ಪ್ರಕರಣಗಳಲ್ಲಿ 91 ಪ್ರಕರಣಗಳಿಗೆ ಮಹಾರಾಷ್ಟ್ರದ ನಂಟಿದೆ.

ಮಂಡ್ಯ-62, ದಾವಣಗೆರೆಯಲ್ಲಿ-19, ಶಿವಮೊಗ್ಗ-12, ಕಲಬುರಗಿ-11, ಬೆಂಗಳೂರು-5, ಉಡುಪಿ-4, ಹಾಸನ-3, ಚಿಕ್ಕಮಗಳೂರು-2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ ತಲಾ 1 ಪ್ರಕರಣ ಸೇರಿದಂತೆ ಒಟ್ಟು 127 ಹೊಸ ಪ್ರಕರಣಗಳು ಪತ್ತೆಯಾಗಿದ್ದು ದಾಖಲೆಯಾಗಿದೆ. ಜೊತೆಗೆ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಒಂದೇ ದಿನ ಗಣನೀಯ ಪ್ರಮಾನದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ.

ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತರು ಕಂಡು ಬಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಗಜೇಂದ್ರಗಡದಲ್ಲಿ ವಾರದ ಸಂತೆ ರದ್ದು!

ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.