ಗದಗ: ಬಣವಿಗೆ ಸಿಡಿಲು ಬಡಿದ ಪರಿಣಾಮ ಮೂರು ಬಣವಿಗಳು ಸಂಪೂರ್ಣ ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ ಯಲ್ಲಪ್ಪ ತಳವಾರ ಅವರಿಗೆ ಸೇರಿದ ಬಣವಿ ಸಿಡಿಲಿಗೆ ಆಹುತಿಯಾಗಿವೆ. ಶೇಂಗಾ,ಬತ್ತ,ಜೋಳದ ಮೂರು ಬಣವಿಗಳು ಅಂದಾಜು 80,000 ಮೌಲ್ಯದ್ದಾಗಿವೆ. ದನಕರುಗಳಿಗಾಗಿ ತನ್ನ ಜಮೀನಿನಲ್ಲಿ ಸಂಗ್ರಹಿಸಿಟ್ಟ ಮೇವಿನ ಬಣವಿಗೆ ಬೆಂಕಿ ಬಿದ್ದದ್ದು ರೈತನನ್ನು ಸಂಕಷ್ಟಕ್ಕೀಡು ಮಾಡಿದೆ. ವರ್ಷ ಪೂರ್ತಿ ದನಕರುಗಳಿಗೆ ಏನು ಮಾಡಬೇಕು. ಬರದಲ್ಲಿ ಆರ್ಥಿಕ ಸಂಕಷ್ಟಕ್ಕೀಡಾಗಿ ಮೇವು ಖರೀದಿ ಕೂಡ ರೈತನಿಗೆ ಅಸಾಧ್ಯವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಗಾದ ಹಾನಿಗೆ ಪರಿಹಾರ ನೀಡಲು ರೈತ ಯಲ್ಲಪ್ಪ ತಳವಾರ ಒತ್ತಾಯಿಸಿದ್ದಾರೆ.

1 comment
  1. ನಿಮ್ಮ ಎಲ್ಲಾ ಸುದ್ದಿಗಳೂ ಉತ್ತಮವಾಗಿ ಪ್ರಸಾರವಾಗುತ್ತಿವೆ ಸರ್…. ಹೀಗೇ ಸಾಗಲಿ….
    ಇನ್ನಷ್ಟು ಸಾಧಿಸಲಿ…..
    ಶುಭವಾಗಲಿ….

Leave a Reply

Your email address will not be published. Required fields are marked *

You May Also Like

ರೈತ ಕಷ್ಟಗಳನ್ನು ಮೆಟ್ಟಿ ನಿಲ್ಲಬೇಕು : ಕವಿತಾ ಮಿಶ್ರಾ

ಕೃಷಿ ಕ್ಷೇತ್ರ ನಶಿಸಿ ಹೊಗುತ್ತಿದೆ. ಇಂದು ರೈತರು ತಲೆ ಮೇಲೆ ಸಾಲ ಹೊತ್ತು ಬದುಕು ಎದುರಿಸುವುದು ಕಷ್ಟಸಾಧ್ಯವಾಗಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಲಾಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಕೃಷಿಕ ಮಹಿಳೆ ಕವಿತಾ ಮಿಶ್ರಾ ಹೇಳಿದರು.

ಶಾಕಿಂಗ್ ನ್ಯೂಸ್: ಕರ್ನಾಟಕವೀಗ ಸೋಂಕು ಅತಿ ವೇಗದಲ್ಲಿ ಹರಡುತ್ತಿರುವ ರಾಜ್ಯ: ಕೇಸ್-ಲೋಡ್ ಸಂಖ್ಯೆಯಲ್ಲಿ 5ನೆ ಸ್ಥಾನ

ಸೋಂಕಿತರ ಸಂಖ್ಯೆಯ ಆಧಾರದ ಪಟ್ಟಿಯಲ್ಲಿ (ಕೇಸ್-ಲೋಡ್) ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 6ನೆ ಸ್ಥಾನದಲ್ಲಿದ್ದ ಕರ್ನಾಟಕ ಶನಿವಾರ ಉತ್ತರಪ್ರದೇಶವನ್ನು ದಾಟಿ 5ನೆ ಸ್ಥಾನಕ್ಕೆ ಏರಿದೆ.

ಕಾರ್ ಟಯರ್ ಬ್ಲಾಸ್ಟ್ : ಇಬ್ಬರು ಬೈಕ್ ಸವಾರರ ದುರ್ಮರಣ

ಉತ್ತರಪ್ರಭಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಹತ್ತಿರ, ಗದಗ ಕಡೆ ಚಲಿಸುತ್ತಿರುವ ಕಾರ್ ಒಂದರ ಟಯರ್ ಬ್ಲಾಸ್ಟ್…

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.