ಗದಗ: ಬಣವಿಗೆ ಸಿಡಿಲು ಬಡಿದ ಪರಿಣಾಮ ಮೂರು ಬಣವಿಗಳು ಸಂಪೂರ್ಣ ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ ಯಲ್ಲಪ್ಪ ತಳವಾರ ಅವರಿಗೆ ಸೇರಿದ ಬಣವಿ ಸಿಡಿಲಿಗೆ ಆಹುತಿಯಾಗಿವೆ. ಶೇಂಗಾ,ಬತ್ತ,ಜೋಳದ ಮೂರು ಬಣವಿಗಳು ಅಂದಾಜು 80,000 ಮೌಲ್ಯದ್ದಾಗಿವೆ. ದನಕರುಗಳಿಗಾಗಿ ತನ್ನ ಜಮೀನಿನಲ್ಲಿ ಸಂಗ್ರಹಿಸಿಟ್ಟ ಮೇವಿನ ಬಣವಿಗೆ ಬೆಂಕಿ ಬಿದ್ದದ್ದು ರೈತನನ್ನು ಸಂಕಷ್ಟಕ್ಕೀಡು ಮಾಡಿದೆ. ವರ್ಷ ಪೂರ್ತಿ ದನಕರುಗಳಿಗೆ ಏನು ಮಾಡಬೇಕು. ಬರದಲ್ಲಿ ಆರ್ಥಿಕ ಸಂಕಷ್ಟಕ್ಕೀಡಾಗಿ ಮೇವು ಖರೀದಿ ಕೂಡ ರೈತನಿಗೆ ಅಸಾಧ್ಯವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಗಾದ ಹಾನಿಗೆ ಪರಿಹಾರ ನೀಡಲು ರೈತ ಯಲ್ಲಪ್ಪ ತಳವಾರ ಒತ್ತಾಯಿಸಿದ್ದಾರೆ.

1 comment
  1. ನಿಮ್ಮ ಎಲ್ಲಾ ಸುದ್ದಿಗಳೂ ಉತ್ತಮವಾಗಿ ಪ್ರಸಾರವಾಗುತ್ತಿವೆ ಸರ್…. ಹೀಗೇ ಸಾಗಲಿ….
    ಇನ್ನಷ್ಟು ಸಾಧಿಸಲಿ…..
    ಶುಭವಾಗಲಿ….

Leave a Reply

Your email address will not be published. Required fields are marked *

You May Also Like

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಶೈಕ್ಷಣಿಕ ವರ್ಷ ಯಾವಾಗ ಅಂತಾ ಸೂಕ್ತ ತೀರ್ಮಾನ

ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನದ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಲಾಕ್ ಡೌನ್ ಸಡಿಲಿಕೆ ನಡುವೆಯೂ ರಣಕೇಕೆ ಹಾಕುತ್ತಿದೆ ಕೊರೊನಾ!

ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.