ಗದಗ: ಬಣವಿಗೆ ಸಿಡಿಲು ಬಡಿದ ಪರಿಣಾಮ ಮೂರು ಬಣವಿಗಳು ಸಂಪೂರ್ಣ ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ ಯಲ್ಲಪ್ಪ ತಳವಾರ ಅವರಿಗೆ ಸೇರಿದ ಬಣವಿ ಸಿಡಿಲಿಗೆ ಆಹುತಿಯಾಗಿವೆ. ಶೇಂಗಾ,ಬತ್ತ,ಜೋಳದ ಮೂರು ಬಣವಿಗಳು ಅಂದಾಜು 80,000 ಮೌಲ್ಯದ್ದಾಗಿವೆ. ದನಕರುಗಳಿಗಾಗಿ ತನ್ನ ಜಮೀನಿನಲ್ಲಿ ಸಂಗ್ರಹಿಸಿಟ್ಟ ಮೇವಿನ ಬಣವಿಗೆ ಬೆಂಕಿ ಬಿದ್ದದ್ದು ರೈತನನ್ನು ಸಂಕಷ್ಟಕ್ಕೀಡು ಮಾಡಿದೆ. ವರ್ಷ ಪೂರ್ತಿ ದನಕರುಗಳಿಗೆ ಏನು ಮಾಡಬೇಕು. ಬರದಲ್ಲಿ ಆರ್ಥಿಕ ಸಂಕಷ್ಟಕ್ಕೀಡಾಗಿ ಮೇವು ಖರೀದಿ ಕೂಡ ರೈತನಿಗೆ ಅಸಾಧ್ಯವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಗಾದ ಹಾನಿಗೆ ಪರಿಹಾರ ನೀಡಲು ರೈತ ಯಲ್ಲಪ್ಪ ತಳವಾರ ಒತ್ತಾಯಿಸಿದ್ದಾರೆ.

1 comment
  1. ನಿಮ್ಮ ಎಲ್ಲಾ ಸುದ್ದಿಗಳೂ ಉತ್ತಮವಾಗಿ ಪ್ರಸಾರವಾಗುತ್ತಿವೆ ಸರ್…. ಹೀಗೇ ಸಾಗಲಿ….
    ಇನ್ನಷ್ಟು ಸಾಧಿಸಲಿ…..
    ಶುಭವಾಗಲಿ….

Leave a Reply

Your email address will not be published. Required fields are marked *

You May Also Like

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…