ಬೆಂಗಳೂರು: ಕೊರೋನಾ ಸಂಕಷ್ಟದಲ್ಲಿ ಪೊಲೀಸರ ಪಾತ್ರ ಮಹತ್ವದ್ದು ಆದರೆ ಇದೀಗ ಪೊಲೀಸರಿಗೂ ಕೊರೋನಾ ಕಾಟ ಶುರುವಾಗುವ ಆತಂಕ ಎದುರಾಗಿದೆ. 26 ಜನ ಪೊಲೀಸರಿಗೆ ಕೊರೋನಾ ಸೋಂಕಿನ ಶಂಕೆ ಇದೆ.
ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಸುಮಾರು 26 ಪೊಲೀಸರಿಗೆ ಇದೀಗ ಕೊರೊನಾ ಶಂಕೆ ಕಾಡುತ್ತಿದೆ. ಎಲ್ಲರನ್ನೂ ಹೋಮ್ ಕ್ವಾರಂಟೈನ್ ಗೆ ಸೂಚಿಸಲಾಗಿದೆ. ಠಾಣೆಯ ಬಂಧಿತ ಕಳ್ಳರಿಗೆ ಕೊರೊನಾ ದೃಢಪಟ್ಟಿದ್ದು, ಆತನ ಸಂಪರ್ಕಕ್ಕೆ ಬಂದ ಹೆಬ್ಬಗೋಡಿ ಪೊಲೀಸರನ್ನು ಇದೀಗ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಇದರಲ್ಲಿ ಪಿಎಸ್ ಐ, ಎಎಸ್‍ ಐ, ಹೆಡ್ ಕಾನ್ಸೆಟೆಬಲ್‍ ಹಾಗೂ ಪೊಲೀಸ್ ವಾಹನದ ಡ್ರೈವರ್ ಕೂಡ ಸೇರಿದ್ದಾರೆ.
ಇತ್ತಿಚೀಗೆ ಜೆ.ಜೆ. ನಗರದಲ್ಲಿ ಇಬ್ಬರು ಕಳ್ಳರನ್ನು ಬಂಧಿಸಲಾಗಿತ್ತು. ಈ ವೇಳೆ ಇಬ್ಬರಿಗೂ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ದುರ್ದೈವಕ್ಕೆ ಇಬ್ಬರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಪೊಲೀಸರಲ್ಲೂ ಆತಂಕ ಸೃಷ್ಟಿಸಿದೆ. ಹೀಗಾಗಿ ಕಳ್ಳರ ಸಂಪರ್ಕಕ್ಕೆ ಬಂದ ಎಲ್ಲ ಪೊಲೀಸರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಹೆಚ್ಚು ಕಡಿಮೆ ಹೆಬ್ಬಗೋಡಿ ಠಾಣೆಯ ಬಹುತೇಕ ಸಿಬ್ಬಂದಿಗೆ ಹೋಮ್ ಕ್ವಾರಂಟೈನ್ ಗೆ ಸೂಚಿಸಿದ್ದರಿಂದ ಠಾಣೆ ಬೀಕೋ ಎನ್ನುತ್ತಿದೆ.

Leave a Reply

Your email address will not be published. Required fields are marked *

You May Also Like

ಗೋವಾದಿಂದ ಬಂದ ಕೂಲಿ ಕಾರ್ಮಿಕ: ಕೊರೊನಾ ಸೋಂಕಿನಿಂದ ಸಾವು!

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಾನಾಪೂರ ಎಲ್.ಟಿ ತಾಂಡಾ ಗ್ರಾಮದ…

ಗ್ರಾಪಂ ಚುನಾವಣೆ ನಾಳೆ ಚಿಹ್ನೆ ಹಂಚಿಕೆ : ಅಭ್ಯರ್ಥಿಗಳಿಗೆ ಚಿನ್ಹೆ ಹಂಚಿಕೆ ಕ್ರಮ ಹೇಗಿರುತ್ತೆ ಇಲ್ಲಿದೆ ಮಾಹಿತಿ

ಗ್ರಾಮ ಪಂಚಾಯತ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದ ನಂತರ ಸ್ಪರ್ಧೆ ಇರುವ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14 ರಂದು ಚುನಾವಣಾಧಿಕಾರಿಗಳು ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ತಿಳಿಸಿದ್ದಾರೆ.

ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.