ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್ ಮಾಡಿಸಿಲ್ಲ ಎಂದು ಆರೋಪಿಸಿ ಪೊಲೀಸ್ ಅಧಿಕಾರಿ ಮೇಲೆ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ.
ಸಬ್ ಇನ್ಸ್ ಪೆಕ್ಟರ್, ಮತ್ತು ಮೂವರಲ್ಲಿ ಸೋಂಕು ಕಾಣಿಸಿತ್ತು. ಆದರೆ ಈ ರೂಮ್ ನ್ನು ಸ್ಯಾನಿಟೈಸ್ ಮಾಡಿಸಿರಲಿಲ್ಲ. ಜೊತೆಗೆ ಪೊಲೀಸರಿಗೆ ಸೂಕ್ತ ವ್ಯವಸ್ಥೆಯೂ ಇರಲಿಲ್ಲ. ಹೀಗಾಗಿ ಇಲ್ಲಿನ ಡಿಸಿಪಿ ಕಚೇರಿ ಎದುರಿಗೆ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು.
ಈ ವೇಳೆ ಪೇದೆಗಳು ಮತ್ತು ಡಿಸಿಪಿ ಎನ್ ಪೌಲ್ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಾತಿಗೆ ಮಾತು ಬೆಳೆದಾಗ
ಪೇದೆಗಳು ಡಿಸಿಪಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.