ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು
ಮೇ 22ರಂದು ಒಂದು ಟ್ರೈನು ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಟು ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ. ಮತ್ತೊಂದು ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9:20 ಹೊರಟು ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗಿದೆ. ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯ.

ಜಮೀನು ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾವೆರಿ ಜಿಲ್ಲೆಯಲ್ಲಿ ನಡೆದಿದೆ.

ಬಸವ ವಸತಿ ಯೋಜನೆ ಮನೆ ಮಂಜೂರು: ಪಿಡಿಒ ತಿಮ್ಮಣ್ಣ ಭೋವಿ

ವರದಿ: ವಿಠಲ ಕೆಳೂತ್ ಮಸ್ಕಿ: ಬಸವ ವಸತಿ ಯೋಜನೆ‌ ಹಾಗೂ ಡಾ.‌ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ 30…

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…