ಮೇ.22 ರಂದು ವಿಶೇಷ ರೈಲು ಸೇವೆ: ಸಚಿವ ಸುರೇಶ್ ಅಂಗಡಿ

ಬೆಳಗಾವಿ: ಮೇ.22 ರಂದು ರಾಜ್ಯದಲ್ಲಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು
ಮೇ 22ರಂದು ಒಂದು ಟ್ರೈನು ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಟು ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ. ಮತ್ತೊಂದು ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9:20 ಹೊರಟು ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.
ಸಿಎಂ ಯಡಿಯೂರಪ್ಪ ಅವರ ಮನವಿಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಾಗಿದೆ. ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ತಿಳಿಸಿದರು.

Exit mobile version