ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸುತ್ತಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ತಮ್ಮ ಟ್ವಿಟರ್ ನಲ್ಲಿ ಪ್ರಕಟಣೆ ನೀಡಿದ್ದಾರೆ.
ಸೋಮವಾರದಿಂದ ನಾಗರಿಕ ವಿಮಾನ ಯಾನ ಸೇವೆಗಳನ್ನು ಹಂತಹಂತವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ರವಾನಿಸಲಾಗಿದೆ ಎಂದು ಪುರಿ ಹೇಳಿದ್ದಾರೆ. ಇದೇ ವೇಳೆ ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿ ಅನುಸರಿಸಬೇಕಾದು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ಸಹ ಕಳುಹಿಸಿಕೊಡಲಾಗಿದೆ.
ಅಲ್ಲದೇ ವಿಮಾನಗಳಲ್ಲಿ ಪ್ರಯಾಣ ಮಾಡ ಬಯಸುವವರು ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಸ್ಪಷ್ಟ ಮಾರ್ಗಸೂಚಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…